ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
05-05-24 04:17 pm
Bangalore Correspondent
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 01:26 pm
Mangalore Correspondent
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm