ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm