ಬ್ರೇಕಿಂಗ್ ನ್ಯೂಸ್
17-04-21 04:06 pm Mangalore Correspondent ಕರಾವಳಿ
ಮಂಗಳೂರು, ಎ.17: ಹಾಸನದಲ್ಲಿ ರೇವ್ ಪಾರ್ಟಿ ಆಯೋಜಿಸಿ ಸಿಕ್ಕಿಬಿದ್ದಿರುವ ಮಂಗಳೂರಿನ ನಾರ್ಕೋಟಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಲತಾ ಅವರನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರೀಲತಾ ವಿರುದ್ಧ ಹಾಸನದ ಆಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಆರೋಪಿಗಳನ್ನು ತನಿಖೆ ನಡಸಲಾಗಿತ್ತು. ತನಿಖೆ ವೇಳೆ ಶ್ರೀಲತಾ ಮತ್ತು ಆಕೆಯ ಮಗ ಅತುಲ್, ಎಸ್ಟೇಟ್ ಮಾಲೀಕ ಗಗನ್ ಜೊತೆ ವಾರದ ಮೊದಲಿನಿಂದಲೇ ನಿರಂತರ ಸಂಪರ್ಕದಲ್ಲಿದ್ದುದ್ದು ಸಾಬೀತಾಗಿತ್ತು. ಅಲ್ಲದೆ, ರೇವ್ ಪಾರ್ಟಿ ನಡೆಸುವುದಕ್ಕೆ ಸ್ಥಳೀಯ ಪೊಲೀಸರ ಅನುಮತಿಯೂ ಬೇಕಾಗಿ ಬರಲ್ಲ. ಮಂಗಳೂರು ಸಿಸಿಬಿಯಲ್ಲಿ ತಾನು ಎಎಸ್ಐ ಆಗಿದ್ದು ಪ್ರಭಾವ ಹೊಂದಿದ್ದೇನೆ ಎಂದು ಎಸ್ಟೇಟ್ ಮಾಲೀಕನಿಗೆ ಭರವಸೆ ತುಂಬಿದ್ದಳು ಅನ್ನೋ ವಿಚಾರವೂ ತನಿಖೆಯಲ್ಲಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಹಾಸನ ಎಸ್ಪಿ ನೇತೃತ್ವದಲ್ಲಿ ನಡೆದಿರುವ ತನಿಖೆಯಲ್ಲಿ ಲೋಪ ಆಗಿರುವುದು ಕಂಡುಬಂದಿದ್ದು, ಸದ್ಯಕ್ಕೆ ಕರ್ತವ್ಯದಿಂದ ಅಮಾನತು ಮಾಡಿದ್ದೇವೆ. ಒಟ್ಟು ಘಟನೆ ಬಗ್ಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಿ, ತನಿಖೆ ನಡೆಸಲಾಗುವುದು. ಆಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


ಎ.10ರಂದು ಹಾಸನದ ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಎಂಬ ನಿಗೂಢ ತಾಣದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಂಗಳೂರು ಮತ್ತು ಬೆಂಗಳೂರಿನ ಅತಿ ಹೆಚ್ಚು ಮಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ವಿಚಾರ ತಿಳಿದ ಹಾಸನ ಪೊಲೀಸರು ನಸುಕಿನಲ್ಲಿ ದಾಳಿ ಮಾಡಿ, 131 ಮಂದಿಯನ್ನು ವಶಕ್ಕೆ ಪಡೆದಿದ್ದರು. ಈ ವೇಳೆ, ಸಾಕಷ್ಟು ಮಾದಕ ದ್ರವ್ಯಗಳು, ಡ್ರಗ್ಸ್ ಮಾತ್ರೆಗಳು, ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ವೇಳೆ, ಮಂಗಳೂರಿನ ಲೇಡಿ ಪೊಲೀಸ್ ಶ್ರೀಲತಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಪಾರ್ಟಿ ಆಯೋಜನೆ ಮಾಡಿದ್ದ ಶ್ರೀಲತಾ ಮಗ ಅತುಲ್ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದಾನೆ.
ಹಾಸನದಲ್ಲಿ ರೇವ್ ಪಾರ್ಟಿ ; ಮಂಗಳೂರಿನ ಲೇಡಿ ಪೊಲೀಸ್ ಮತ್ತು ಮಗ ಕಿಂಗ್ ಪಿನ್ ! ಪೊಲೀಸ್ ಅರೆಸ್ಟ್, ಮಗ ಎಸ್ಕೇಪ್ !
Mangalore Police commissioners Shashi Kumar has suspended lady Police of Narcotics Srilata for organising Rave Party in Hassan in which more than 120 boys and girls were arrested.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm