ಬ್ರೇಕಿಂಗ್ ನ್ಯೂಸ್
17-04-21 04:06 pm Mangalore Correspondent ಕರಾವಳಿ
ಮಂಗಳೂರು, ಎ.17: ಹಾಸನದಲ್ಲಿ ರೇವ್ ಪಾರ್ಟಿ ಆಯೋಜಿಸಿ ಸಿಕ್ಕಿಬಿದ್ದಿರುವ ಮಂಗಳೂರಿನ ನಾರ್ಕೋಟಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಲತಾ ಅವರನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರೀಲತಾ ವಿರುದ್ಧ ಹಾಸನದ ಆಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಆರೋಪಿಗಳನ್ನು ತನಿಖೆ ನಡಸಲಾಗಿತ್ತು. ತನಿಖೆ ವೇಳೆ ಶ್ರೀಲತಾ ಮತ್ತು ಆಕೆಯ ಮಗ ಅತುಲ್, ಎಸ್ಟೇಟ್ ಮಾಲೀಕ ಗಗನ್ ಜೊತೆ ವಾರದ ಮೊದಲಿನಿಂದಲೇ ನಿರಂತರ ಸಂಪರ್ಕದಲ್ಲಿದ್ದುದ್ದು ಸಾಬೀತಾಗಿತ್ತು. ಅಲ್ಲದೆ, ರೇವ್ ಪಾರ್ಟಿ ನಡೆಸುವುದಕ್ಕೆ ಸ್ಥಳೀಯ ಪೊಲೀಸರ ಅನುಮತಿಯೂ ಬೇಕಾಗಿ ಬರಲ್ಲ. ಮಂಗಳೂರು ಸಿಸಿಬಿಯಲ್ಲಿ ತಾನು ಎಎಸ್ಐ ಆಗಿದ್ದು ಪ್ರಭಾವ ಹೊಂದಿದ್ದೇನೆ ಎಂದು ಎಸ್ಟೇಟ್ ಮಾಲೀಕನಿಗೆ ಭರವಸೆ ತುಂಬಿದ್ದಳು ಅನ್ನೋ ವಿಚಾರವೂ ತನಿಖೆಯಲ್ಲಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಹಾಸನ ಎಸ್ಪಿ ನೇತೃತ್ವದಲ್ಲಿ ನಡೆದಿರುವ ತನಿಖೆಯಲ್ಲಿ ಲೋಪ ಆಗಿರುವುದು ಕಂಡುಬಂದಿದ್ದು, ಸದ್ಯಕ್ಕೆ ಕರ್ತವ್ಯದಿಂದ ಅಮಾನತು ಮಾಡಿದ್ದೇವೆ. ಒಟ್ಟು ಘಟನೆ ಬಗ್ಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಿ, ತನಿಖೆ ನಡೆಸಲಾಗುವುದು. ಆಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


ಎ.10ರಂದು ಹಾಸನದ ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಎಂಬ ನಿಗೂಢ ತಾಣದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಂಗಳೂರು ಮತ್ತು ಬೆಂಗಳೂರಿನ ಅತಿ ಹೆಚ್ಚು ಮಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ವಿಚಾರ ತಿಳಿದ ಹಾಸನ ಪೊಲೀಸರು ನಸುಕಿನಲ್ಲಿ ದಾಳಿ ಮಾಡಿ, 131 ಮಂದಿಯನ್ನು ವಶಕ್ಕೆ ಪಡೆದಿದ್ದರು. ಈ ವೇಳೆ, ಸಾಕಷ್ಟು ಮಾದಕ ದ್ರವ್ಯಗಳು, ಡ್ರಗ್ಸ್ ಮಾತ್ರೆಗಳು, ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ವೇಳೆ, ಮಂಗಳೂರಿನ ಲೇಡಿ ಪೊಲೀಸ್ ಶ್ರೀಲತಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಪಾರ್ಟಿ ಆಯೋಜನೆ ಮಾಡಿದ್ದ ಶ್ರೀಲತಾ ಮಗ ಅತುಲ್ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದಾನೆ.
ಹಾಸನದಲ್ಲಿ ರೇವ್ ಪಾರ್ಟಿ ; ಮಂಗಳೂರಿನ ಲೇಡಿ ಪೊಲೀಸ್ ಮತ್ತು ಮಗ ಕಿಂಗ್ ಪಿನ್ ! ಪೊಲೀಸ್ ಅರೆಸ್ಟ್, ಮಗ ಎಸ್ಕೇಪ್ !
Mangalore Police commissioners Shashi Kumar has suspended lady Police of Narcotics Srilata for organising Rave Party in Hassan in which more than 120 boys and girls were arrested.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 07:22 pm
HK News Staffer
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am