ಬ್ರೇಕಿಂಗ್ ನ್ಯೂಸ್
17-04-21 04:06 pm Mangalore Correspondent ಕರಾವಳಿ
ಮಂಗಳೂರು, ಎ.17: ಹಾಸನದಲ್ಲಿ ರೇವ್ ಪಾರ್ಟಿ ಆಯೋಜಿಸಿ ಸಿಕ್ಕಿಬಿದ್ದಿರುವ ಮಂಗಳೂರಿನ ನಾರ್ಕೋಟಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಲತಾ ಅವರನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರೀಲತಾ ವಿರುದ್ಧ ಹಾಸನದ ಆಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಆರೋಪಿಗಳನ್ನು ತನಿಖೆ ನಡಸಲಾಗಿತ್ತು. ತನಿಖೆ ವೇಳೆ ಶ್ರೀಲತಾ ಮತ್ತು ಆಕೆಯ ಮಗ ಅತುಲ್, ಎಸ್ಟೇಟ್ ಮಾಲೀಕ ಗಗನ್ ಜೊತೆ ವಾರದ ಮೊದಲಿನಿಂದಲೇ ನಿರಂತರ ಸಂಪರ್ಕದಲ್ಲಿದ್ದುದ್ದು ಸಾಬೀತಾಗಿತ್ತು. ಅಲ್ಲದೆ, ರೇವ್ ಪಾರ್ಟಿ ನಡೆಸುವುದಕ್ಕೆ ಸ್ಥಳೀಯ ಪೊಲೀಸರ ಅನುಮತಿಯೂ ಬೇಕಾಗಿ ಬರಲ್ಲ. ಮಂಗಳೂರು ಸಿಸಿಬಿಯಲ್ಲಿ ತಾನು ಎಎಸ್ಐ ಆಗಿದ್ದು ಪ್ರಭಾವ ಹೊಂದಿದ್ದೇನೆ ಎಂದು ಎಸ್ಟೇಟ್ ಮಾಲೀಕನಿಗೆ ಭರವಸೆ ತುಂಬಿದ್ದಳು ಅನ್ನೋ ವಿಚಾರವೂ ತನಿಖೆಯಲ್ಲಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಹಾಸನ ಎಸ್ಪಿ ನೇತೃತ್ವದಲ್ಲಿ ನಡೆದಿರುವ ತನಿಖೆಯಲ್ಲಿ ಲೋಪ ಆಗಿರುವುದು ಕಂಡುಬಂದಿದ್ದು, ಸದ್ಯಕ್ಕೆ ಕರ್ತವ್ಯದಿಂದ ಅಮಾನತು ಮಾಡಿದ್ದೇವೆ. ಒಟ್ಟು ಘಟನೆ ಬಗ್ಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಿ, ತನಿಖೆ ನಡೆಸಲಾಗುವುದು. ಆಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


ಎ.10ರಂದು ಹಾಸನದ ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಎಂಬ ನಿಗೂಢ ತಾಣದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಂಗಳೂರು ಮತ್ತು ಬೆಂಗಳೂರಿನ ಅತಿ ಹೆಚ್ಚು ಮಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ವಿಚಾರ ತಿಳಿದ ಹಾಸನ ಪೊಲೀಸರು ನಸುಕಿನಲ್ಲಿ ದಾಳಿ ಮಾಡಿ, 131 ಮಂದಿಯನ್ನು ವಶಕ್ಕೆ ಪಡೆದಿದ್ದರು. ಈ ವೇಳೆ, ಸಾಕಷ್ಟು ಮಾದಕ ದ್ರವ್ಯಗಳು, ಡ್ರಗ್ಸ್ ಮಾತ್ರೆಗಳು, ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ವೇಳೆ, ಮಂಗಳೂರಿನ ಲೇಡಿ ಪೊಲೀಸ್ ಶ್ರೀಲತಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಪಾರ್ಟಿ ಆಯೋಜನೆ ಮಾಡಿದ್ದ ಶ್ರೀಲತಾ ಮಗ ಅತುಲ್ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದಾನೆ.
ಹಾಸನದಲ್ಲಿ ರೇವ್ ಪಾರ್ಟಿ ; ಮಂಗಳೂರಿನ ಲೇಡಿ ಪೊಲೀಸ್ ಮತ್ತು ಮಗ ಕಿಂಗ್ ಪಿನ್ ! ಪೊಲೀಸ್ ಅರೆಸ್ಟ್, ಮಗ ಎಸ್ಕೇಪ್ !
Mangalore Police commissioners Shashi Kumar has suspended lady Police of Narcotics Srilata for organising Rave Party in Hassan in which more than 120 boys and girls were arrested.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm