ಬ್ರೇಕಿಂಗ್ ನ್ಯೂಸ್
17-04-21 05:39 pm Mangalore Correspondent ಕರಾವಳಿ
ಮಂಗಳೂರು, ಎ.17: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲ ಠಾಣೆಗಳಲ್ಲಿಯೂ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ. ಇದೇ ವೇಳೆ, ನಗರದ ಉರ್ವಾ ಠಾಣೆಯನ್ನು ಮಾಡೆಲ್ ಕೋವಿಡ್ ಸ್ಟೇಶನ್ ಎನ್ನುವ ರೀತಿ ಪರಿವರ್ತಿಸಲಾಗಿದೆ.

ಇದರಂತೆ ಯಾವುದೇ ಸಾರ್ವಜನಿಕರು ಠಾಣೆಯ ಒಳಗೆ ಹೋಗುವಂತಿಲ್ಲ. ಸ್ಟೇಶನ್ ಹೊರಭಾಗದಲ್ಲಿ ಮೇಜು ಇರಿಸಿ, ಸಾರ್ವಜನಿಕರ ದೂರು ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಮೂವರು ಸಿಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ತೆಗೆದುಕೊಂಡು ಬರುವ ದೂರು ಅರ್ಜಿಯನ್ನು ಅಲ್ಲಿರುವ ಸೋಂಕು ನಿರೋಧಕ ಬಾಕ್ಸ್ ನಲ್ಲಿ ಇಡಲಾಗುತ್ತದೆ. ಹತ್ತು ನಿಮಿಷ ಕಾಲ ಅರ್ಜಿಯನ್ನು ಬಾಕ್ಸ್ ನಲ್ಲಿಟ್ಟು ದೂರನ್ನು ಸ್ವೀಕರಿಸಲಾಗುತ್ತದೆ. ಯುವಿ ಡಿಸ್ ಇನ್ ಫೆಕ್ಷನ್ ಹೆಸರಿನ ಬಾಕ್ಸ್ ನಲ್ಲಿಟ್ಟರೆ ಅರ್ಜಿಯ ಪೇಪರಲ್ಲಿ ಅಂಟಿರುವ ರೋಗಾಣು ಸತ್ತು ಹೋಗುತ್ತವಂತೆ.

ಅಲ್ಲದೆ, ಪೊಲೀಸರಿಗೆ ಠಾಣೆಯಲ್ಲೇ ಪಲ್ಸ್ ಟೆಸ್ಟ್ ಮತ್ತು ಟೆಂಪರೇಚರ್ ಪರೀಕ್ಷೆ ಮಾಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ, ಠಾಣೆಯ ಒಳಗಿರುವ ಪೊಲೀಸ್ ಸಿಬಂದಿ ದಿನಕ್ಕೆ ಮೂರು ಬಾರಿ ಕಷಾಯ ತಯಾರಿಸಿ ಕುಡಿಯಬೇಕು. ಅದಕ್ಕಾಗಿ ಠಾಣೆಯಲ್ಲೇ ಕಷಾಯ ತಯಾರಿಸಲಾಗುತ್ತದೆ. ಅರಸಿನಪುಡಿ, ಕಾಳು ಮೆಣಸು, ಚಕ್ಕೆ, ಶುಂಠಿ, ಲವಂಗ, ಜೀರಿಗೆ, ಬೆಳ್ಳುಳ್ಳಿ, ಬೆಲ್ಲ ಇತ್ಯಾದಿ ಆಯುರ್ವೇದಿಕ್ ಅಂಶಗಳನ್ನು ಒಟ್ಟು ಸೇರಿಸಿ, ಕಷಾಯ ತಯಾರಿಸಲಾಗುತ್ತದೆ.


ಉರ್ವಾ ಮಾಡೆಲ್ ಕೋವಿಡ್ ಸ್ಟೇಶನ್ ರೆಡಿಯಾಗಿದ್ದನ್ನು ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಅಲ್ಲಿ ತಯಾರಿಸಿದ್ದ ಕಷಾಯವನ್ನೂ ಕಮಿಷನರ್ ಕುಡಿದು ಟೇಸ್ಟ್ ನೋಡಿಕೊಂಡರು. ಕಳೆದ ಬಾರಿ ಕೊರೊನಾ ಸಂದರ್ಭದಲ್ಲಿ ಮಂಗಳೂರಿನಲ್ಲಿ 300 ಮಂದಿ ಪೊಲೀಸರಿಗೆ ಸೋಂಕು ಕಂಡುಬಂದಿತ್ತು. ಹೀಗಾಗಿ ಈ ಬಾರಿ ಕೊರೊನಾ ಅಲೆ ದಾಂಗುಡಿ ಇಟ್ಟಿರುವಾಗಲೇ ಮುಂಜಾಗ್ರತೆಗಾಗಿ ಕಮಿಷನರ್ ಕ್ರಮ ಕೈಗೊಂಡಿದ್ದಾರೆ.
Mangalore Urwa Police Station turns into Covid Model station for the safety of Police Personnel. Police Commissioner Shashi Kumar and Dcp Hariram Shankar visited the station.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 07:22 pm
HK News Staffer
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am