ಬ್ರೇಕಿಂಗ್ ನ್ಯೂಸ್
17-04-21 05:39 pm Mangalore Correspondent ಕರಾವಳಿ
ಮಂಗಳೂರು, ಎ.17: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲ ಠಾಣೆಗಳಲ್ಲಿಯೂ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ. ಇದೇ ವೇಳೆ, ನಗರದ ಉರ್ವಾ ಠಾಣೆಯನ್ನು ಮಾಡೆಲ್ ಕೋವಿಡ್ ಸ್ಟೇಶನ್ ಎನ್ನುವ ರೀತಿ ಪರಿವರ್ತಿಸಲಾಗಿದೆ.
ಇದರಂತೆ ಯಾವುದೇ ಸಾರ್ವಜನಿಕರು ಠಾಣೆಯ ಒಳಗೆ ಹೋಗುವಂತಿಲ್ಲ. ಸ್ಟೇಶನ್ ಹೊರಭಾಗದಲ್ಲಿ ಮೇಜು ಇರಿಸಿ, ಸಾರ್ವಜನಿಕರ ದೂರು ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಮೂವರು ಸಿಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ತೆಗೆದುಕೊಂಡು ಬರುವ ದೂರು ಅರ್ಜಿಯನ್ನು ಅಲ್ಲಿರುವ ಸೋಂಕು ನಿರೋಧಕ ಬಾಕ್ಸ್ ನಲ್ಲಿ ಇಡಲಾಗುತ್ತದೆ. ಹತ್ತು ನಿಮಿಷ ಕಾಲ ಅರ್ಜಿಯನ್ನು ಬಾಕ್ಸ್ ನಲ್ಲಿಟ್ಟು ದೂರನ್ನು ಸ್ವೀಕರಿಸಲಾಗುತ್ತದೆ. ಯುವಿ ಡಿಸ್ ಇನ್ ಫೆಕ್ಷನ್ ಹೆಸರಿನ ಬಾಕ್ಸ್ ನಲ್ಲಿಟ್ಟರೆ ಅರ್ಜಿಯ ಪೇಪರಲ್ಲಿ ಅಂಟಿರುವ ರೋಗಾಣು ಸತ್ತು ಹೋಗುತ್ತವಂತೆ.
ಅಲ್ಲದೆ, ಪೊಲೀಸರಿಗೆ ಠಾಣೆಯಲ್ಲೇ ಪಲ್ಸ್ ಟೆಸ್ಟ್ ಮತ್ತು ಟೆಂಪರೇಚರ್ ಪರೀಕ್ಷೆ ಮಾಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ, ಠಾಣೆಯ ಒಳಗಿರುವ ಪೊಲೀಸ್ ಸಿಬಂದಿ ದಿನಕ್ಕೆ ಮೂರು ಬಾರಿ ಕಷಾಯ ತಯಾರಿಸಿ ಕುಡಿಯಬೇಕು. ಅದಕ್ಕಾಗಿ ಠಾಣೆಯಲ್ಲೇ ಕಷಾಯ ತಯಾರಿಸಲಾಗುತ್ತದೆ. ಅರಸಿನಪುಡಿ, ಕಾಳು ಮೆಣಸು, ಚಕ್ಕೆ, ಶುಂಠಿ, ಲವಂಗ, ಜೀರಿಗೆ, ಬೆಳ್ಳುಳ್ಳಿ, ಬೆಲ್ಲ ಇತ್ಯಾದಿ ಆಯುರ್ವೇದಿಕ್ ಅಂಶಗಳನ್ನು ಒಟ್ಟು ಸೇರಿಸಿ, ಕಷಾಯ ತಯಾರಿಸಲಾಗುತ್ತದೆ.
ಉರ್ವಾ ಮಾಡೆಲ್ ಕೋವಿಡ್ ಸ್ಟೇಶನ್ ರೆಡಿಯಾಗಿದ್ದನ್ನು ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಅಲ್ಲಿ ತಯಾರಿಸಿದ್ದ ಕಷಾಯವನ್ನೂ ಕಮಿಷನರ್ ಕುಡಿದು ಟೇಸ್ಟ್ ನೋಡಿಕೊಂಡರು. ಕಳೆದ ಬಾರಿ ಕೊರೊನಾ ಸಂದರ್ಭದಲ್ಲಿ ಮಂಗಳೂರಿನಲ್ಲಿ 300 ಮಂದಿ ಪೊಲೀಸರಿಗೆ ಸೋಂಕು ಕಂಡುಬಂದಿತ್ತು. ಹೀಗಾಗಿ ಈ ಬಾರಿ ಕೊರೊನಾ ಅಲೆ ದಾಂಗುಡಿ ಇಟ್ಟಿರುವಾಗಲೇ ಮುಂಜಾಗ್ರತೆಗಾಗಿ ಕಮಿಷನರ್ ಕ್ರಮ ಕೈಗೊಂಡಿದ್ದಾರೆ.
Mangalore Urwa Police Station turns into Covid Model station for the safety of Police Personnel. Police Commissioner Shashi Kumar and Dcp Hariram Shankar visited the station.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm