ಬ್ರೇಕಿಂಗ್ ನ್ಯೂಸ್
17-04-21 05:39 pm Mangalore Correspondent ಕರಾವಳಿ
ಮಂಗಳೂರು, ಎ.17: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲ ಠಾಣೆಗಳಲ್ಲಿಯೂ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ. ಇದೇ ವೇಳೆ, ನಗರದ ಉರ್ವಾ ಠಾಣೆಯನ್ನು ಮಾಡೆಲ್ ಕೋವಿಡ್ ಸ್ಟೇಶನ್ ಎನ್ನುವ ರೀತಿ ಪರಿವರ್ತಿಸಲಾಗಿದೆ.

ಇದರಂತೆ ಯಾವುದೇ ಸಾರ್ವಜನಿಕರು ಠಾಣೆಯ ಒಳಗೆ ಹೋಗುವಂತಿಲ್ಲ. ಸ್ಟೇಶನ್ ಹೊರಭಾಗದಲ್ಲಿ ಮೇಜು ಇರಿಸಿ, ಸಾರ್ವಜನಿಕರ ದೂರು ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಮೂವರು ಸಿಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ತೆಗೆದುಕೊಂಡು ಬರುವ ದೂರು ಅರ್ಜಿಯನ್ನು ಅಲ್ಲಿರುವ ಸೋಂಕು ನಿರೋಧಕ ಬಾಕ್ಸ್ ನಲ್ಲಿ ಇಡಲಾಗುತ್ತದೆ. ಹತ್ತು ನಿಮಿಷ ಕಾಲ ಅರ್ಜಿಯನ್ನು ಬಾಕ್ಸ್ ನಲ್ಲಿಟ್ಟು ದೂರನ್ನು ಸ್ವೀಕರಿಸಲಾಗುತ್ತದೆ. ಯುವಿ ಡಿಸ್ ಇನ್ ಫೆಕ್ಷನ್ ಹೆಸರಿನ ಬಾಕ್ಸ್ ನಲ್ಲಿಟ್ಟರೆ ಅರ್ಜಿಯ ಪೇಪರಲ್ಲಿ ಅಂಟಿರುವ ರೋಗಾಣು ಸತ್ತು ಹೋಗುತ್ತವಂತೆ.

ಅಲ್ಲದೆ, ಪೊಲೀಸರಿಗೆ ಠಾಣೆಯಲ್ಲೇ ಪಲ್ಸ್ ಟೆಸ್ಟ್ ಮತ್ತು ಟೆಂಪರೇಚರ್ ಪರೀಕ್ಷೆ ಮಾಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ, ಠಾಣೆಯ ಒಳಗಿರುವ ಪೊಲೀಸ್ ಸಿಬಂದಿ ದಿನಕ್ಕೆ ಮೂರು ಬಾರಿ ಕಷಾಯ ತಯಾರಿಸಿ ಕುಡಿಯಬೇಕು. ಅದಕ್ಕಾಗಿ ಠಾಣೆಯಲ್ಲೇ ಕಷಾಯ ತಯಾರಿಸಲಾಗುತ್ತದೆ. ಅರಸಿನಪುಡಿ, ಕಾಳು ಮೆಣಸು, ಚಕ್ಕೆ, ಶುಂಠಿ, ಲವಂಗ, ಜೀರಿಗೆ, ಬೆಳ್ಳುಳ್ಳಿ, ಬೆಲ್ಲ ಇತ್ಯಾದಿ ಆಯುರ್ವೇದಿಕ್ ಅಂಶಗಳನ್ನು ಒಟ್ಟು ಸೇರಿಸಿ, ಕಷಾಯ ತಯಾರಿಸಲಾಗುತ್ತದೆ.


ಉರ್ವಾ ಮಾಡೆಲ್ ಕೋವಿಡ್ ಸ್ಟೇಶನ್ ರೆಡಿಯಾಗಿದ್ದನ್ನು ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಅಲ್ಲಿ ತಯಾರಿಸಿದ್ದ ಕಷಾಯವನ್ನೂ ಕಮಿಷನರ್ ಕುಡಿದು ಟೇಸ್ಟ್ ನೋಡಿಕೊಂಡರು. ಕಳೆದ ಬಾರಿ ಕೊರೊನಾ ಸಂದರ್ಭದಲ್ಲಿ ಮಂಗಳೂರಿನಲ್ಲಿ 300 ಮಂದಿ ಪೊಲೀಸರಿಗೆ ಸೋಂಕು ಕಂಡುಬಂದಿತ್ತು. ಹೀಗಾಗಿ ಈ ಬಾರಿ ಕೊರೊನಾ ಅಲೆ ದಾಂಗುಡಿ ಇಟ್ಟಿರುವಾಗಲೇ ಮುಂಜಾಗ್ರತೆಗಾಗಿ ಕಮಿಷನರ್ ಕ್ರಮ ಕೈಗೊಂಡಿದ್ದಾರೆ.
Mangalore Urwa Police Station turns into Covid Model station for the safety of Police Personnel. Police Commissioner Shashi Kumar and Dcp Hariram Shankar visited the station.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm