ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ

19-04-21 10:59 am       Mangalore Correspondent   ಕರಾವಳಿ

ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. 

Photo credits : Manju Neereshwallya

ಮಂಗಳೂರು, ಎ.19 : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. 

ಐದು ದಿನಗಳ ಪರ್ಯಂತ ವೈದಿಕ ವಿಧಿಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು. ಬೆಳಗ್ಗೆ ಶ್ರೀ ದೇವರಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆಯಿತು.  

ಪುಷ್ಪಾಲಂಕೃತ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರ ಉತ್ಸವದ ಬಳಿಕ ರಥಾರೋಹಣ ನೆರವೇರಿತು. ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು. 

Photo Gallery: ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ

Mangalore, Konchady Mahalasa Temple  Brahma Rathotsava held. Pictures by Manju Neereshwallya.