ಬ್ರೇಕಿಂಗ್ ನ್ಯೂಸ್
19-04-21 06:04 pm Udupi Correspondent ಕರಾವಳಿ
ಉಡುಪಿ, ಎ.19 : ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಬೆಂಗಳೂರಿನಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾಕಷ್ಟು ಹೆಚ್ಚಿದೆ. ಬೆಂಗಳೂರಿನಿಂದ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.

ಸಾರ್ವಜನಿಕರು ಕುಟುಂಬದ ಹಿತದೃಷ್ಟಿಯಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಪರೀಕ್ಷೆಗೆ ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
"ಸಮುದಾಯಕ್ಕೆ ಕೊರೊನಾ ಹಬ್ಬುವುದನ್ನು ತಡೆಯಬೇಕಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 3000 ಸ್ವಾಬ್ ಟೆಸ್ಟ್ ಮಾಡುತ್ತಿದ್ದೇವೆ. ಯಾವುದೇ ಒಂದು ಪ್ರದೇಶದಲ್ಲಿ ಹೆಚ್ಚು ಕೇಸುಗಳು ಪತ್ತೆಯಾಗುತ್ತಿಲ್ಲ. ಜಿಲ್ಲೆಯ ಅಲ್ಲಲ್ಲಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದರು.

"ಇಂದು ಎರಡು ಕಡೆ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಕೇವಲ ಐದು ಪ್ರಕರಣ ಬಂದ ಪರಿಸರದಲ್ಲೂ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಲಾಗುತ್ತದೆ. ಎಂಐಟಿ ಎರಡು ದಿನದಲ್ಲಿ ಕಂಟೈನ್ಮೆಂಟ್ ಮುಕ್ತವಾಗಲಿದೆ" ಎಂದು ವಿವರಣೆ ನೀಡಿದರು.

"ಜಿಲ್ಲೆಯಲ್ಲಿ ಐಸಿಯುಗಳ ಕೊರತೆಯಿಲ್ಲ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಕೂಡ ಸಾಕಷ್ಟಿದೆ. ಆದರೆ, ಜಿಲ್ಲೆಯ ಜನ ಮೈಮರೆಯಬಾರದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಡಿ, ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.
Those entering Udupi from Maharashtra and Kerala must have covid negative report states Udupi Dc Jagadeesh.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm