ಬ್ರೇಕಿಂಗ್ ನ್ಯೂಸ್
21-04-21 12:45 pm Mangalore Correspondent ಕರಾವಳಿ
ಸುಳ್ಯ, ಎ.21: ರಾಜ್ಯ ಸರಕಾರ ಕೋವಿಡ್ ನಿರ್ಬಂಧಗಳನ್ನು ಹೇರಿದ್ದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿಢೀರ್ ಆಗಿ ಸರ್ಪ ಸಂಸ್ಕಾರ ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಪ ಸಂಸ್ಕಾರ ಸೇವೆಯ ಹಿನ್ನೆಲೆಯಲ್ಲಿ ನೂರಾರು ಭಕ್ತರು ಒಂದು ದಿನದ ಮುನ್ನವೇ ಕ್ಷೇತ್ರಕ್ಕೆ ಆಗಮಿಸಿದ್ದರು. ಸರ್ಪ ಸಂಸ್ಕಾರ ಸೇವೆ ನೆರವೇರಿಸುವ ಮಂದಿ ಎರಡು ದಿನದ ಮೊದಲೇ ಬಂದು ಇರಬೇಕಾಗುವುದರಿಂದ ಭಕ್ತರು ಸೇವೆಯನ್ನು ತಿಂಗಳ ಮೊದಲೇ ಬುಕ್ ಮಾಡಿಕೊಂಡು ಬಂದಿದ್ದರು.

ಆದರೆ, ದಿಢೀರ್ ಆಗಿ ಸೇವೆಯನ್ನು ಬಂದ್ ಮಾಡಿರುವುದಕ್ಕೆ ದೇವಸ್ಥಾನದ ಆಡಳಿತ ಸಮಿತಿಯನ್ನು ಭಕ್ತರು ತರಾಟೆಗೆ ತೆಗೆದುಕೊಂಡರು. ಸರ್ಪ ಸಂಸ್ಕಾರ ಸೇವೆಯನ್ನು ನಡೆಸಲು ಕುಕ್ಕೆಗೆ ಬಂದಿದ್ದೆವು. ಎರಡು- ಮೂರು ತಿಂಗಳ ಮೊದಲೇ ಬುಕ್ ಮಾಡಿದ್ದೆವು. ಆದರೆ ಈಗ ಕೋವಿಡ್ ನೆಪದಲ್ಲಿ ದಿಢೀರ್ ಆಗಿ ರದ್ದು ಪಡಿಸಿದ್ದಾರೆ. ದೂರದ ಊರುಗಳಿಂದ ಎರಡು ದಿನ ಮೊದಲೇ ರೂಮ್ ಬುಕ್ ಮಾಡಿಕೊಂಡು ಉಳಿದುಕೊಂಡವರಿಗೆ ಸಮಸ್ಯೆ ಆಗಿದೆ. ಸೇವೆ ಇರುವುದನ್ನು ಖಚಿತಪಡಿಸಿಕೊಂಡೇ ಬಂದಿದ್ದೆವು , ಈಗ ಇಲ್ಲ ಎಂದರೆ ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡುತ್ತಿದ್ದರು.
ಸರ್ಪ ಸಂಸ್ಕಾರ ಸೇವೆ ಎರಡು ದಿನ ನಡೆಯುತ್ತದೆ. ಅದಕ್ಕಾಗಿ ಮುನ್ನಾ ದಿನವೇ ಬಂದು ಇರಬೇಕಾಗುತ್ತದೆ. ಆದರೆ, ಸರಕಾರದ ಮಾರ್ಗಸೂಚಿ ದಿಢೀರ್ ಆಗಿ ಬಂದಿದ್ದು, ಅದನ್ನು ಪಾಲಿಸಬೇಕಾಗುತ್ತದೆ. ಗುರುವಾರದ ಸೇವೆಗೆ ಅವಕಾಶ ಇಲ್ಲದ ಕಾರಣ ಬುಧವಾರದ ಸೇವೆಯನ್ನು ರದ್ದು ಪಡಿಸಲಾಗಿದೆ ಎಂದು ಆಡಳಿತ ಮಂಡಳಿಯ ಸದಸ್ಯರು ಹೇಳಿದರು. ಸರಕಾರದ ಮಾರ್ಗಸೂಚಿ ಪ್ರಕಾರ ದೇವಾಲಯದಲ್ಲಿ ಯಾವುದೇ ಸೇವೆಗಳನ್ನು ನಡೆಸಲು ಅವಕಾಶ ಇಲ್ಲ. ಆದರೆ ಈ ಬಗ್ಗೆ ಅರಿಯದ ನೂರಾರು ಭಕ್ತಾದಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
Devotees turn angry after Poojas being cancelled in Kukke Shri Subrahmanya Temple. Many devotees had already arrived from poojas but we're disappointed as all the prayers were cancelled.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm