ಬ್ರೇಕಿಂಗ್ ನ್ಯೂಸ್
21-04-21 12:45 pm Mangalore Correspondent ಕರಾವಳಿ
ಸುಳ್ಯ, ಎ.21: ರಾಜ್ಯ ಸರಕಾರ ಕೋವಿಡ್ ನಿರ್ಬಂಧಗಳನ್ನು ಹೇರಿದ್ದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿಢೀರ್ ಆಗಿ ಸರ್ಪ ಸಂಸ್ಕಾರ ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಪ ಸಂಸ್ಕಾರ ಸೇವೆಯ ಹಿನ್ನೆಲೆಯಲ್ಲಿ ನೂರಾರು ಭಕ್ತರು ಒಂದು ದಿನದ ಮುನ್ನವೇ ಕ್ಷೇತ್ರಕ್ಕೆ ಆಗಮಿಸಿದ್ದರು. ಸರ್ಪ ಸಂಸ್ಕಾರ ಸೇವೆ ನೆರವೇರಿಸುವ ಮಂದಿ ಎರಡು ದಿನದ ಮೊದಲೇ ಬಂದು ಇರಬೇಕಾಗುವುದರಿಂದ ಭಕ್ತರು ಸೇವೆಯನ್ನು ತಿಂಗಳ ಮೊದಲೇ ಬುಕ್ ಮಾಡಿಕೊಂಡು ಬಂದಿದ್ದರು.
ಆದರೆ, ದಿಢೀರ್ ಆಗಿ ಸೇವೆಯನ್ನು ಬಂದ್ ಮಾಡಿರುವುದಕ್ಕೆ ದೇವಸ್ಥಾನದ ಆಡಳಿತ ಸಮಿತಿಯನ್ನು ಭಕ್ತರು ತರಾಟೆಗೆ ತೆಗೆದುಕೊಂಡರು. ಸರ್ಪ ಸಂಸ್ಕಾರ ಸೇವೆಯನ್ನು ನಡೆಸಲು ಕುಕ್ಕೆಗೆ ಬಂದಿದ್ದೆವು. ಎರಡು- ಮೂರು ತಿಂಗಳ ಮೊದಲೇ ಬುಕ್ ಮಾಡಿದ್ದೆವು. ಆದರೆ ಈಗ ಕೋವಿಡ್ ನೆಪದಲ್ಲಿ ದಿಢೀರ್ ಆಗಿ ರದ್ದು ಪಡಿಸಿದ್ದಾರೆ. ದೂರದ ಊರುಗಳಿಂದ ಎರಡು ದಿನ ಮೊದಲೇ ರೂಮ್ ಬುಕ್ ಮಾಡಿಕೊಂಡು ಉಳಿದುಕೊಂಡವರಿಗೆ ಸಮಸ್ಯೆ ಆಗಿದೆ. ಸೇವೆ ಇರುವುದನ್ನು ಖಚಿತಪಡಿಸಿಕೊಂಡೇ ಬಂದಿದ್ದೆವು , ಈಗ ಇಲ್ಲ ಎಂದರೆ ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡುತ್ತಿದ್ದರು.
ಸರ್ಪ ಸಂಸ್ಕಾರ ಸೇವೆ ಎರಡು ದಿನ ನಡೆಯುತ್ತದೆ. ಅದಕ್ಕಾಗಿ ಮುನ್ನಾ ದಿನವೇ ಬಂದು ಇರಬೇಕಾಗುತ್ತದೆ. ಆದರೆ, ಸರಕಾರದ ಮಾರ್ಗಸೂಚಿ ದಿಢೀರ್ ಆಗಿ ಬಂದಿದ್ದು, ಅದನ್ನು ಪಾಲಿಸಬೇಕಾಗುತ್ತದೆ. ಗುರುವಾರದ ಸೇವೆಗೆ ಅವಕಾಶ ಇಲ್ಲದ ಕಾರಣ ಬುಧವಾರದ ಸೇವೆಯನ್ನು ರದ್ದು ಪಡಿಸಲಾಗಿದೆ ಎಂದು ಆಡಳಿತ ಮಂಡಳಿಯ ಸದಸ್ಯರು ಹೇಳಿದರು. ಸರಕಾರದ ಮಾರ್ಗಸೂಚಿ ಪ್ರಕಾರ ದೇವಾಲಯದಲ್ಲಿ ಯಾವುದೇ ಸೇವೆಗಳನ್ನು ನಡೆಸಲು ಅವಕಾಶ ಇಲ್ಲ. ಆದರೆ ಈ ಬಗ್ಗೆ ಅರಿಯದ ನೂರಾರು ಭಕ್ತಾದಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
Devotees turn angry after Poojas being cancelled in Kukke Shri Subrahmanya Temple. Many devotees had already arrived from poojas but we're disappointed as all the prayers were cancelled.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm