ಬ್ರೇಕಿಂಗ್ ನ್ಯೂಸ್
22-04-21 11:44 am Mangalore Correspondent ಕರಾವಳಿ
ಮಂಗಳೂರು, ಎ.22: ಚಾಲಕನ ಬೇಜವಾಬ್ದಾರಿಯಿಂದ ಕಸ ವಿಲೇವಾರಿ ಮಾಡುವ ಟ್ರಕ್ ಇಳಿಜಾರಿನಲ್ಲಿ ನೇರವಾಗಿ ನುಗ್ಗಿ ಬಂದು ನಾಲ್ಕಾರು ವಾಹನಗಳಿಗೆ ಡಿಕ್ಕಿಯಾಗಿದ್ದಲ್ಲದೆ, ಮಾರುಕಟ್ಟೆಯ ಅಂಗಡಿಗಳಿಗೆ ನುಗ್ಗಿದ ಘಟನೆ ಕಂಕನಾಡಿ ಮಾರುಕಟ್ಟೆಯಲ್ಲಿ ನಡೆದಿದೆ.


ಮಂಗಳೂರು ನಗರದಲ್ಲಿ ಕಸ ಹೆಕ್ಕಲು ಗುತ್ತಿಗೆ ಪಡೆದಿರುವ ಆಂಟನಿ ವೇಸ್ಟ್ ಕಂಪನಿಯ ಟ್ರಕ್ಕನ್ನು ಚಾಲಕ ಕಂಕನಾಡಿ ಮಾರುಕಟ್ಟೆ ಬಳಿ ನಿಲ್ಲಿಸಿ, ಕೆಳಕ್ಕೆ ಇಳಿದಿದ್ದ. ಹಿಂದಿನಿಂದ ಕಾರ್ಮಿಕರು ಕಸ ತುಂಬಿಸುತ್ತಿದ್ದರು. ಚಾಲಕ ವಾಹನವನ್ನು ನ್ಯೂಟ್ರಲ್ ನಲ್ಲಿರಿಸಿ ಇಳಿದಿದ್ದರಿಂದ ಟ್ರಕ್ ಕೆಳಗೆ ಇಳಿದಿದ್ದು, ಅಲ್ಲಿದ್ದ ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದಿದ್ದಲ್ಲದೆ, ಇಂಡಿಯನ್ ಚಿಕನ್ ಎನ್ನುವ ಕೋಳಿ ಮಾಂಸದ ಅಂಗಡಿಗೆ ನುಗ್ಗಿ ಜಖಂ ಮಾಡಿದೆ.



ಚಿಕನ್ ಶಾಪ್ ಎದುರಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟರ್ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅಂಗಡಿಯ ಇಬ್ಬರು ಸಿಬಂದಿ ಕಾಲಿಗೆ ಗಾಯಗೊಂಡಿದ್ದಾರೆ. ಟ್ರಕ್ ಅಂಗಡಿಯ ಮುಂಭಾಗಕ್ಕೆ ಬಡಿದು ನಿಂತಿದ್ದು, ಕೂಡಲೇ ಅದಕ್ಕೆ ಹತ್ತಿದ ಸ್ಥಳೀಯರು ವಾಹನವನ್ನು ಆಫ್ ಮಾಡಿದ್ದಾರೆ. ಘಟನೆ ಸಂದರ್ಭ ಹೆಚ್ಚು ಜನರು ಇಲ್ಲದ ಕಾರಣ ಪ್ರಾಣಾಪಾಯ ಆಗಿಲ್ಲ. ಸಾರ್ವಜನಿಕರು ಟ್ರಕ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ, ಆತ ಅಲ್ಲಿಂದ ಪರಾರಿಯಾಗಿದ್ದಾನೆ.



ಸ್ಥಳೀಯರ ಪ್ರಕಾರ, ಟ್ರಕ್ ಚಾಲಕ ಕೆಳಗಿಳಿದು ಮೊಬೈಲಲ್ಲಿ ಮಾತನಾಡುತ್ತಿದ್ದ. ಟ್ರಕ್ಕನ್ನು ನ್ಯೂಟ್ರಲ್ ನಲ್ಲಿರಿಸಿ ಕೆಳಕ್ಕೆ ಇಳಿದಿದ್ದೇ ತಪ್ಪು. ಆತನನ್ನು ಈ ಘಟನೆಗೆ ಹೊಣೆಯಾಗಿಸಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಂಕನಾಡಿ ಮತ್ತು ಟ್ರಾಫಿಕ್ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ವಶಕ್ಕೆ ಪಡೆದಿದ್ದಾರೆ.
Four Cars and two wheelers completely damaged after a Mcc Antony Waste truck entered a Chicken Shop in Kankanady Market in Mangalore. The accident took place as driver kept the truck in nutral and got down of the truck.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm