ಬ್ರೇಕಿಂಗ್ ನ್ಯೂಸ್
22-04-21 11:44 am Mangalore Correspondent ಕರಾವಳಿ
ಮಂಗಳೂರು, ಎ.22: ಚಾಲಕನ ಬೇಜವಾಬ್ದಾರಿಯಿಂದ ಕಸ ವಿಲೇವಾರಿ ಮಾಡುವ ಟ್ರಕ್ ಇಳಿಜಾರಿನಲ್ಲಿ ನೇರವಾಗಿ ನುಗ್ಗಿ ಬಂದು ನಾಲ್ಕಾರು ವಾಹನಗಳಿಗೆ ಡಿಕ್ಕಿಯಾಗಿದ್ದಲ್ಲದೆ, ಮಾರುಕಟ್ಟೆಯ ಅಂಗಡಿಗಳಿಗೆ ನುಗ್ಗಿದ ಘಟನೆ ಕಂಕನಾಡಿ ಮಾರುಕಟ್ಟೆಯಲ್ಲಿ ನಡೆದಿದೆ.


ಮಂಗಳೂರು ನಗರದಲ್ಲಿ ಕಸ ಹೆಕ್ಕಲು ಗುತ್ತಿಗೆ ಪಡೆದಿರುವ ಆಂಟನಿ ವೇಸ್ಟ್ ಕಂಪನಿಯ ಟ್ರಕ್ಕನ್ನು ಚಾಲಕ ಕಂಕನಾಡಿ ಮಾರುಕಟ್ಟೆ ಬಳಿ ನಿಲ್ಲಿಸಿ, ಕೆಳಕ್ಕೆ ಇಳಿದಿದ್ದ. ಹಿಂದಿನಿಂದ ಕಾರ್ಮಿಕರು ಕಸ ತುಂಬಿಸುತ್ತಿದ್ದರು. ಚಾಲಕ ವಾಹನವನ್ನು ನ್ಯೂಟ್ರಲ್ ನಲ್ಲಿರಿಸಿ ಇಳಿದಿದ್ದರಿಂದ ಟ್ರಕ್ ಕೆಳಗೆ ಇಳಿದಿದ್ದು, ಅಲ್ಲಿದ್ದ ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದಿದ್ದಲ್ಲದೆ, ಇಂಡಿಯನ್ ಚಿಕನ್ ಎನ್ನುವ ಕೋಳಿ ಮಾಂಸದ ಅಂಗಡಿಗೆ ನುಗ್ಗಿ ಜಖಂ ಮಾಡಿದೆ.



ಚಿಕನ್ ಶಾಪ್ ಎದುರಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟರ್ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅಂಗಡಿಯ ಇಬ್ಬರು ಸಿಬಂದಿ ಕಾಲಿಗೆ ಗಾಯಗೊಂಡಿದ್ದಾರೆ. ಟ್ರಕ್ ಅಂಗಡಿಯ ಮುಂಭಾಗಕ್ಕೆ ಬಡಿದು ನಿಂತಿದ್ದು, ಕೂಡಲೇ ಅದಕ್ಕೆ ಹತ್ತಿದ ಸ್ಥಳೀಯರು ವಾಹನವನ್ನು ಆಫ್ ಮಾಡಿದ್ದಾರೆ. ಘಟನೆ ಸಂದರ್ಭ ಹೆಚ್ಚು ಜನರು ಇಲ್ಲದ ಕಾರಣ ಪ್ರಾಣಾಪಾಯ ಆಗಿಲ್ಲ. ಸಾರ್ವಜನಿಕರು ಟ್ರಕ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ, ಆತ ಅಲ್ಲಿಂದ ಪರಾರಿಯಾಗಿದ್ದಾನೆ.



ಸ್ಥಳೀಯರ ಪ್ರಕಾರ, ಟ್ರಕ್ ಚಾಲಕ ಕೆಳಗಿಳಿದು ಮೊಬೈಲಲ್ಲಿ ಮಾತನಾಡುತ್ತಿದ್ದ. ಟ್ರಕ್ಕನ್ನು ನ್ಯೂಟ್ರಲ್ ನಲ್ಲಿರಿಸಿ ಕೆಳಕ್ಕೆ ಇಳಿದಿದ್ದೇ ತಪ್ಪು. ಆತನನ್ನು ಈ ಘಟನೆಗೆ ಹೊಣೆಯಾಗಿಸಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಂಕನಾಡಿ ಮತ್ತು ಟ್ರಾಫಿಕ್ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ವಶಕ್ಕೆ ಪಡೆದಿದ್ದಾರೆ.
Four Cars and two wheelers completely damaged after a Mcc Antony Waste truck entered a Chicken Shop in Kankanady Market in Mangalore. The accident took place as driver kept the truck in nutral and got down of the truck.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm