ಬ್ರೇಕಿಂಗ್ ನ್ಯೂಸ್
22-04-21 11:44 am Mangalore Correspondent ಕರಾವಳಿ
ಮಂಗಳೂರು, ಎ.22: ಚಾಲಕನ ಬೇಜವಾಬ್ದಾರಿಯಿಂದ ಕಸ ವಿಲೇವಾರಿ ಮಾಡುವ ಟ್ರಕ್ ಇಳಿಜಾರಿನಲ್ಲಿ ನೇರವಾಗಿ ನುಗ್ಗಿ ಬಂದು ನಾಲ್ಕಾರು ವಾಹನಗಳಿಗೆ ಡಿಕ್ಕಿಯಾಗಿದ್ದಲ್ಲದೆ, ಮಾರುಕಟ್ಟೆಯ ಅಂಗಡಿಗಳಿಗೆ ನುಗ್ಗಿದ ಘಟನೆ ಕಂಕನಾಡಿ ಮಾರುಕಟ್ಟೆಯಲ್ಲಿ ನಡೆದಿದೆ.


ಮಂಗಳೂರು ನಗರದಲ್ಲಿ ಕಸ ಹೆಕ್ಕಲು ಗುತ್ತಿಗೆ ಪಡೆದಿರುವ ಆಂಟನಿ ವೇಸ್ಟ್ ಕಂಪನಿಯ ಟ್ರಕ್ಕನ್ನು ಚಾಲಕ ಕಂಕನಾಡಿ ಮಾರುಕಟ್ಟೆ ಬಳಿ ನಿಲ್ಲಿಸಿ, ಕೆಳಕ್ಕೆ ಇಳಿದಿದ್ದ. ಹಿಂದಿನಿಂದ ಕಾರ್ಮಿಕರು ಕಸ ತುಂಬಿಸುತ್ತಿದ್ದರು. ಚಾಲಕ ವಾಹನವನ್ನು ನ್ಯೂಟ್ರಲ್ ನಲ್ಲಿರಿಸಿ ಇಳಿದಿದ್ದರಿಂದ ಟ್ರಕ್ ಕೆಳಗೆ ಇಳಿದಿದ್ದು, ಅಲ್ಲಿದ್ದ ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದಿದ್ದಲ್ಲದೆ, ಇಂಡಿಯನ್ ಚಿಕನ್ ಎನ್ನುವ ಕೋಳಿ ಮಾಂಸದ ಅಂಗಡಿಗೆ ನುಗ್ಗಿ ಜಖಂ ಮಾಡಿದೆ.



ಚಿಕನ್ ಶಾಪ್ ಎದುರಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟರ್ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅಂಗಡಿಯ ಇಬ್ಬರು ಸಿಬಂದಿ ಕಾಲಿಗೆ ಗಾಯಗೊಂಡಿದ್ದಾರೆ. ಟ್ರಕ್ ಅಂಗಡಿಯ ಮುಂಭಾಗಕ್ಕೆ ಬಡಿದು ನಿಂತಿದ್ದು, ಕೂಡಲೇ ಅದಕ್ಕೆ ಹತ್ತಿದ ಸ್ಥಳೀಯರು ವಾಹನವನ್ನು ಆಫ್ ಮಾಡಿದ್ದಾರೆ. ಘಟನೆ ಸಂದರ್ಭ ಹೆಚ್ಚು ಜನರು ಇಲ್ಲದ ಕಾರಣ ಪ್ರಾಣಾಪಾಯ ಆಗಿಲ್ಲ. ಸಾರ್ವಜನಿಕರು ಟ್ರಕ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ, ಆತ ಅಲ್ಲಿಂದ ಪರಾರಿಯಾಗಿದ್ದಾನೆ.



ಸ್ಥಳೀಯರ ಪ್ರಕಾರ, ಟ್ರಕ್ ಚಾಲಕ ಕೆಳಗಿಳಿದು ಮೊಬೈಲಲ್ಲಿ ಮಾತನಾಡುತ್ತಿದ್ದ. ಟ್ರಕ್ಕನ್ನು ನ್ಯೂಟ್ರಲ್ ನಲ್ಲಿರಿಸಿ ಕೆಳಕ್ಕೆ ಇಳಿದಿದ್ದೇ ತಪ್ಪು. ಆತನನ್ನು ಈ ಘಟನೆಗೆ ಹೊಣೆಯಾಗಿಸಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಂಕನಾಡಿ ಮತ್ತು ಟ್ರಾಫಿಕ್ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ವಶಕ್ಕೆ ಪಡೆದಿದ್ದಾರೆ.
Four Cars and two wheelers completely damaged after a Mcc Antony Waste truck entered a Chicken Shop in Kankanady Market in Mangalore. The accident took place as driver kept the truck in nutral and got down of the truck.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm