ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
18-07-25 10:31 pm
Bangalore Correspondent
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm