ಬ್ರೇಕಿಂಗ್ ನ್ಯೂಸ್
22-04-21 07:25 pm Mangaluru correspondent ಕರಾವಳಿ
ಮಂಗಳೂರು, ಎ.22: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗತ್ಯ ಸಾಮಗ್ರಿಗಳ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪ್, ಕಚೇರಿ ವ್ಯಾಪಾರ ಸಂಕೀರ್ಣಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡುವಂತೆ ಹೇಳಿಕೊಂಡು ಹೋಗಿದ್ದಾರೆ.

ಗುರುವಾರ ಸಂಜೆ ದಿಢೀರ್ ಆಗಿ ಪಾಲಿಕೆಯ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಬಟ್ಟೆ ಶಾಪ್, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ನಗರದ ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ಎಲ್ಲ ರೀತಿಯ ಅಂಗಡಿಗಳನ್ನು ತೆರೆದಿದ್ದು ಎಂದಿನಂತೆ ವ್ಯಾಪಾರ ನಡೆಸುತ್ತಿದ್ದವು.


ರಾಜ್ಯ ಸರಕಾರ ಹೊರಡಿಸಿರುವ ಗೈಡ್ ಲೈನ್ಸ್ ಪ್ರಕಾರ, ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು, ಶಾಪ್ ಗಳನ್ನು ತೆರೆಯುವಂತಿಲ್ಲ. ಅದರಂತೆ, ಮಾರ್ಗಸೂಚಿಯ ಬಗ್ಗೆ ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತರಕಾರಿ, ದೀನಸಿ ಸಾಮಗ್ರಿ, ಹಾಲು, ಪೆಟ್ರೋಲ್, ಹೊಟೇಲ್, ಆಹಾರ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಬೇಕರಿ ಇನ್ನಿತರ ಅಂಗಡಿಗಳು, ಬ್ಯಾಂಕ್, ವಿಮಾ ಕಚೇರಿಗಳು ಹೀಗೆ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಸಾಮಗ್ರಿಗಳನ್ನು ಹೊರತುಪಡಿಸಿ ಇತರೇ ವ್ಯಾಪಾರ ಸಂಕೀರ್ಣಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ಎಪ್ರಿಲ್ 21ರಿಂದ ಮೇ 4ರ ವರೆಗಿನ ಅರೆ ಲಾಕ್ಡೌನ್ ಘೋಷಣೆಯಲ್ಲಿ ಇದನ್ನು ಒಳಗೊಳಿಸಿಯೇ ಆದೇಶ ಮಾಡಲಾಗಿತ್ತು. ಆದರೆ, ಮೊದಲ ದಿನವಾದ ಎಪ್ರಿಲ್ 21ರಂದು ಇತರೇ ದಿನಗಳಂತೇ ಎಲ್ಲ ರೀತಿಯ ಅಂಗಡಿ, ಶಾಪ್ ಗಳನ್ನು ತೆರೆದು ವ್ಯಾಪಾರಸ್ಥರು ವ್ಯಾಪಾರ ನಡೆಸಿದ್ದರು. ಇದು ತಿಳಿಯುತ್ತಿದ್ದಂತೇ ಬೆಂಗಳೂರು, ಮಂಗಳೂರು ಸೇರಿ ರಾಜ್ಯದಾದ್ಯಂತ ಕೆಳಹಂತದ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಸೂಚನೆ ನೀಡಲಾಗಿದೆ. ಅದರ ಪ್ರಕಾರ, ಸಂಜೆ ಹೊತ್ತಿಗೆ ಅಲರ್ಟ್ ಮಾಡುತ್ತಾ ಅಧಿಕಾರಿಗಳು ಸಾಗಿದ್ದಾರೆ. ನಾಳೆಯೂ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಅಂಗಡಿ, ಶಾಪ್ ಗಳನ್ನು ತೆರೆದರೆ ದಂಡ ಕಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
The Mangalore Mcc authorities close down shops that were open even after strict government orders on Night Curfew.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm