ಬ್ರೇಕಿಂಗ್ ನ್ಯೂಸ್
22-04-21 07:25 pm Mangaluru correspondent ಕರಾವಳಿ
ಮಂಗಳೂರು, ಎ.22: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗತ್ಯ ಸಾಮಗ್ರಿಗಳ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪ್, ಕಚೇರಿ ವ್ಯಾಪಾರ ಸಂಕೀರ್ಣಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡುವಂತೆ ಹೇಳಿಕೊಂಡು ಹೋಗಿದ್ದಾರೆ.

ಗುರುವಾರ ಸಂಜೆ ದಿಢೀರ್ ಆಗಿ ಪಾಲಿಕೆಯ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಬಟ್ಟೆ ಶಾಪ್, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ನಗರದ ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ಎಲ್ಲ ರೀತಿಯ ಅಂಗಡಿಗಳನ್ನು ತೆರೆದಿದ್ದು ಎಂದಿನಂತೆ ವ್ಯಾಪಾರ ನಡೆಸುತ್ತಿದ್ದವು.


ರಾಜ್ಯ ಸರಕಾರ ಹೊರಡಿಸಿರುವ ಗೈಡ್ ಲೈನ್ಸ್ ಪ್ರಕಾರ, ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು, ಶಾಪ್ ಗಳನ್ನು ತೆರೆಯುವಂತಿಲ್ಲ. ಅದರಂತೆ, ಮಾರ್ಗಸೂಚಿಯ ಬಗ್ಗೆ ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತರಕಾರಿ, ದೀನಸಿ ಸಾಮಗ್ರಿ, ಹಾಲು, ಪೆಟ್ರೋಲ್, ಹೊಟೇಲ್, ಆಹಾರ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಬೇಕರಿ ಇನ್ನಿತರ ಅಂಗಡಿಗಳು, ಬ್ಯಾಂಕ್, ವಿಮಾ ಕಚೇರಿಗಳು ಹೀಗೆ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಸಾಮಗ್ರಿಗಳನ್ನು ಹೊರತುಪಡಿಸಿ ಇತರೇ ವ್ಯಾಪಾರ ಸಂಕೀರ್ಣಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ಎಪ್ರಿಲ್ 21ರಿಂದ ಮೇ 4ರ ವರೆಗಿನ ಅರೆ ಲಾಕ್ಡೌನ್ ಘೋಷಣೆಯಲ್ಲಿ ಇದನ್ನು ಒಳಗೊಳಿಸಿಯೇ ಆದೇಶ ಮಾಡಲಾಗಿತ್ತು. ಆದರೆ, ಮೊದಲ ದಿನವಾದ ಎಪ್ರಿಲ್ 21ರಂದು ಇತರೇ ದಿನಗಳಂತೇ ಎಲ್ಲ ರೀತಿಯ ಅಂಗಡಿ, ಶಾಪ್ ಗಳನ್ನು ತೆರೆದು ವ್ಯಾಪಾರಸ್ಥರು ವ್ಯಾಪಾರ ನಡೆಸಿದ್ದರು. ಇದು ತಿಳಿಯುತ್ತಿದ್ದಂತೇ ಬೆಂಗಳೂರು, ಮಂಗಳೂರು ಸೇರಿ ರಾಜ್ಯದಾದ್ಯಂತ ಕೆಳಹಂತದ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಸೂಚನೆ ನೀಡಲಾಗಿದೆ. ಅದರ ಪ್ರಕಾರ, ಸಂಜೆ ಹೊತ್ತಿಗೆ ಅಲರ್ಟ್ ಮಾಡುತ್ತಾ ಅಧಿಕಾರಿಗಳು ಸಾಗಿದ್ದಾರೆ. ನಾಳೆಯೂ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಅಂಗಡಿ, ಶಾಪ್ ಗಳನ್ನು ತೆರೆದರೆ ದಂಡ ಕಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
The Mangalore Mcc authorities close down shops that were open even after strict government orders on Night Curfew.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm