ಮಂಗಳೂರು: ನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ

25-08-20 01:02 pm       Mangalore Reporter   ಕರಾವಳಿ

ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ಆಗಸ್ಟ್ 25: ಮಂಗಳೂರು ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಯಂಗ್ ಎಂಡ್ ಎನರ್ಜಟಿಕ್ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೀದರ್ ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಷಯ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಅವರು ನಾಳೆ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ.

ಎಲೆಕ್ಟ್ರಿಕಲ್ ಎಂಜಿನಿಯರ್ ನಲ್ಲಿ ಪದವಿ ಪಡೆದಿರುವ ಅಕ್ಷಯ್ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗುವ ಮುನ್ನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಪಾಲಿಕೆಯ ಕಮಿಷನರ್ ಆಗಿದ್ದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.