ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm