ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.
ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.
ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm