ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm