ಬ್ರೇಕಿಂಗ್ ನ್ಯೂಸ್
24-04-21 02:36 pm Udupi Correspondent ಕರಾವಳಿ
ಉಡುಪಿ, ಎ.24: ಎಲ್ಲೆಡೆ ಕೋವಿಡ್ ಜಾಗೃತಿ, ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿರುವ ಮಧ್ಯೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮೆಹಂದಿ ಕಾರ್ಯಕ್ರಮಮದಲ್ಲಿ ಭಾಗಿಯಾಗಿ ಸುದ್ದಿಯಾಗಿದ್ದಾರೆ. ಉಡುಪಿಯಲ್ಲಿ ಬೀದಿಗಿಳಿದು ಜನರನ್ನು ರೈಟ್ ಲೆಫ್ಟ್ ತೆಗೆದುಕೊಂಡಿದ್ದ ಜಿಲ್ಲಾಧಿಕಾರಿಯೇ ಸ್ವತಃ ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಇಲ್ಲದೆ ಮೆಹಂದಿಯಲ್ಲಿ ಪಾಲ್ಗೊಂಡಿದ್ದ ಫೋಟೊವನ್ನು ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಜನರು ಭಾರೀ ಕೀಟಲೆ ಮಾಡಿದ್ದಾರೆ.

ಎಎಸ್ಪಿ ಒಬ್ಬರ ಪುತ್ರಿಯ ಮದುವೆಯ ಮೆಹಂದಿ ಕಾರ್ಯಕ್ರಮ ಹಾಲ್ ಒಂದರಲ್ಲಿ ನಡೆದಿದ್ದು, ಅದರಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಜಗದೀಶ್ ಪಾಲ್ಗೊಂಡಿದ್ದ ಫೋಟೋ ವೈರಲ್ ಆಗಿತ್ತು. ಮಾಸ್ಕ್ ಹಾಕದೇ ಹುಡುಗಿ ಮತ್ತು ಇತರ ಸಂಬಂಧಿಕರ ಜೊತೆ ಅಕ್ಕ ಪಕ್ಕದಲ್ಲಿ ನಿಂತಿದ್ದ ಫೋಟೋದ ಬಗ್ಗೆ ಜನರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಟ್ಸಪ್ ಮತ್ತು ಫೇಸ್ಬುಕ್ ನಲ್ಲಿ ಈ ಬಗ್ಗೆ ಆಕ್ರೋಶದ ಮಾತುಗಳನ್ನು ಬರೆದಿದ್ದಾರೆ.

ಮೊನ್ನೆಯಷ್ಟೇ ಬಸ್ಸಿನಲ್ಲಿ ಹೋಗುತ್ತಿದ್ದ ಕಾಲೇಜು ಹುಡುಗಿಯರನ್ನು ಅರ್ಧಕ್ಕೆ ಇಳಿಸಿ, ಕೋವಿಡ್ ನಿಯಮದ ಪ್ರಕಾರ ಬಸ್ಸಿನಲ್ಲಿ ನಿಂತುಕೊಂಡು ಸಾಗುವಂತಿಲ್ಲ. ಬಸ್ಸಿನಲ್ಲಿ ಇಷ್ಟೊಂದು ಮಂದಿ ಹೋಗುವುದಾದರೆ ಕೋವಿಡ್ ನಿಮಯ ಎಲ್ಲಿ ಪಾಲನೆಯಾಗುತ್ತದೆ ಎಂದು ಬಸ್ಸಿನಿಂದ ಅರ್ಧ ದಾರಿಯಲ್ಲೇ ನಿಲ್ಲಿಸಿ ವಿದ್ಯಾರ್ಥಿನಿಯರನ್ನು ಗದರಿದ್ದರು. ಇದೇ ವೇಳೆ, ಕೆಲವು ವಿದ್ಯಾರ್ಥಿನಿಯರು ನಾವು ತುಂಬ ದೂರ ಹೋಗಬೇಕು. ಈ ಬಸ್ ಬಿಟ್ಟರೆ ನಮಗೆ ಆನಂತರ ಬಸ್ ಸಿಗಲ್ಲ. ಮನೆ ತಲುಪುವಾಗ ಲೇಟ್ ಆಗುತ್ತೆ. ಹೆಚ್ಚುವರಿ ಬಸ್ ಬಿಡದೆ ಏಕಾಏಕಿ ಬಸ್ಸಿನಿಂದ ಇಳಿಸಿದರೆ ಸಂಜೆಯ ಹೊತ್ತಿಗೆ ನಾವೇನು ಮಾಡಬೇಕು ಎಂದು ನೋವು ತೋಡಿಕೊಂಡಿದ್ದರು. ಇದರ ವಿಡಿಯೋ ಭಾರೀ ವೈರಲ್ ಆಗಿತ್ತಲ್ಲದೆ, ಜಿಲ್ಲಾಧಿಕಾರಿಯ ನಡೆಗೆ ವಿರೋಧವೂ ಕೇಳಿಬಂದಿತ್ತು.
ಇದೀಗ ಕಾನೂನು ಹೇರುವ, ಪಾಲನೆ ಮಾಡುವ ಜಿಲ್ಲಾಧಿಕಾರಿಯೇ ಸ್ವತಃ ಮಾಸ್ಕ್ ಹಾಕ್ಕೊಳ್ಳದೆ ಮೆಹಂದಿ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದು ಜನರ ಕೈಗೆ ಅಸ್ತ್ರ ಸಿಕ್ಕಂತಾಗಿದೆ.
Social media is abuzz with the citizens of the district expressing rage against deputy commissioner (DC) G Jagadeesha reportedly not wearing a mask while attending the Mehendi program of the daughter of additional SP on the evening of Friday, April 23.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm