ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.

ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.


ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.



ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm