ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.
ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.
ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm