ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.

ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.


ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.



ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm