ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm