ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm