ಬ್ರೇಕಿಂಗ್ ನ್ಯೂಸ್
            
                        25-04-21 09:44 pm Mangaluru correspondent ಕರಾವಳಿ
            ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
            
            
            Covid Weekend Curfew in Karnataka Mangalore administration curtails 44 Marriages that was in Kateel temple today to 10.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm