ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm