ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.
ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.
ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.
ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm