ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm