ಬ್ರೇಕಿಂಗ್ ನ್ಯೂಸ್
26-04-21 05:21 pm Udupi Correspondent ಕರಾವಳಿ
ಉಡುಪಿ, ಏ.26 : ದೇಶದಲ್ಲಿ ಕೊರೊ ಕಾರಣದಿಂದ ಆಕ್ಸಿಜನ್ ಕೊರತೆ ಕಾಣಿಸಿಕೊಂಡ ಬೆನ್ನಲ್ಲೇ ಸರಕಾರ ಎಚ್ಚತ್ತುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಆಕ್ಸಿಜನ್ ರಿಫಿಲ್ಲಿಂಗ್ ಘಟಕ ಕಾಪು ತಾಲೂಕಿನ ಬೆಳಪುವಿನಲ್ಲಿ ಆರಂಭಗೊಂಡಿದೆ.
ಮಂಗಳೂರಿನ ಬೈಕಂಪಾಡಿ ಮತ್ತು ಕಾರ್ನಾಡ್ ಕೈಗಾರಿಕಾ ವಲಯದಲ್ಲಿರುವ ಮೂರು ಆಕ್ಸಿಜನ್ ಘಟಕಗಳಿಂದ ಸದ್ಯ ಉಡುಪಿ ಜಿಲ್ಲೆಯ ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ. ಆದರೆ ಈಗ ಬೆಳಪುವಿನಲ್ಲಿ ಆಕ್ಸಿಜನ್ ರಿಫಿಲ್ಲಿಂಗ್ ಸ್ಥಾವರ ಸ್ಥಾಪನೆಯಾಗಿದ್ದು ಜಿಲ್ಲೆಯಲ್ಲೇ ರೀ ಫಿಲ್ಲಿಂಗ್ ಸಾಧ್ಯವಾಗಲಿದೆ.
ಬೆಳಪು ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎನ್. ಕ್ರೈಯೋಜನಿಕ್ಸ್ ಪ್ರೈ. ಲಿ. ಸಂಸ್ಥೆಯು ಕೈಗಾರಿಕೆಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸರಬರಾಜು ಮಾಡುವ ನಿಟ್ಟಿನಲ್ಲಿ ಸ್ಥಾಪಿಸಿದೆ. ಇಲ್ಲಿಗೆ ಬೇಕಾಗುವ ಲಿಕ್ವಿಡ್ ಆಕ್ಸಿಜನ್ ಅನ್ನು ಬೆಂಗಳೂರು ಮತ್ತು ಬಳ್ಳಾರಿ ಸಮೀಪದ ತೋರಂಗಲ್ನಿಂದ ತರಿಸಿಕೊಳ್ಳಲಾಗುತ್ತದೆ. ಒಮ್ಮೆಗೆ 20 ಸಾವಿರ ಕ್ಯೂಬಿಕ್ ಮೀ. ಲಿಕ್ವಿಡ್ ಆಕ್ಸಿಜನ್ ತರಿಸಿ ದಾಸ್ತಾನು ಮಾಡಿ ಆನಂತರ ಗ್ಯಾಸ್ ಆಗಿ ಸಂಸ್ಕರಿಸಿ ಸಿಲಿಂಡರ್ಗಳಿಗೆ ತುಂಬಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ನಟರಾಜ್, ಸ್ಥಾವರ ಸ್ಥಾಪನೆಯಿಂದಾಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಕಡಿಮೆ ಅವಧಿಯಲ್ಲಿ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತದೆ. ಜಿಲ್ಲೆಯ ಉಡುಪಿ, ಮಣಿಪಾಲ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಸರಕಾರಿ ಮತ್ತು ಖಾಸಗಿ ವಲಯದ 40ಕ್ಕೂ ಅಧಿಕ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬರಾಜು ಮಾಡಲು ಸುಲಭ ಎಂದು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಬೆಳಪುವಿನ ಈ ಘಟಕದಿಂದಾಗಿ ಜಿಲ್ಲೆಯ ಮೆಡಿಕಲ್ ಎಮರ್ಜೆನ್ಸಿಗೆ ಸಹಾಯವಾಗಲಿದೆ. ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
The government now opens an oxygen refilling center in Kapu, Udupi.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm