ಬ್ರೇಕಿಂಗ್ ನ್ಯೂಸ್
26-04-21 05:21 pm Udupi Correspondent ಕರಾವಳಿ
ಉಡುಪಿ, ಏ.26 : ದೇಶದಲ್ಲಿ ಕೊರೊ ಕಾರಣದಿಂದ ಆಕ್ಸಿಜನ್ ಕೊರತೆ ಕಾಣಿಸಿಕೊಂಡ ಬೆನ್ನಲ್ಲೇ ಸರಕಾರ ಎಚ್ಚತ್ತುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಆಕ್ಸಿಜನ್ ರಿಫಿಲ್ಲಿಂಗ್ ಘಟಕ ಕಾಪು ತಾಲೂಕಿನ ಬೆಳಪುವಿನಲ್ಲಿ ಆರಂಭಗೊಂಡಿದೆ.
ಮಂಗಳೂರಿನ ಬೈಕಂಪಾಡಿ ಮತ್ತು ಕಾರ್ನಾಡ್ ಕೈಗಾರಿಕಾ ವಲಯದಲ್ಲಿರುವ ಮೂರು ಆಕ್ಸಿಜನ್ ಘಟಕಗಳಿಂದ ಸದ್ಯ ಉಡುಪಿ ಜಿಲ್ಲೆಯ ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ. ಆದರೆ ಈಗ ಬೆಳಪುವಿನಲ್ಲಿ ಆಕ್ಸಿಜನ್ ರಿಫಿಲ್ಲಿಂಗ್ ಸ್ಥಾವರ ಸ್ಥಾಪನೆಯಾಗಿದ್ದು ಜಿಲ್ಲೆಯಲ್ಲೇ ರೀ ಫಿಲ್ಲಿಂಗ್ ಸಾಧ್ಯವಾಗಲಿದೆ.
ಬೆಳಪು ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎನ್. ಕ್ರೈಯೋಜನಿಕ್ಸ್ ಪ್ರೈ. ಲಿ. ಸಂಸ್ಥೆಯು ಕೈಗಾರಿಕೆಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸರಬರಾಜು ಮಾಡುವ ನಿಟ್ಟಿನಲ್ಲಿ ಸ್ಥಾಪಿಸಿದೆ. ಇಲ್ಲಿಗೆ ಬೇಕಾಗುವ ಲಿಕ್ವಿಡ್ ಆಕ್ಸಿಜನ್ ಅನ್ನು ಬೆಂಗಳೂರು ಮತ್ತು ಬಳ್ಳಾರಿ ಸಮೀಪದ ತೋರಂಗಲ್ನಿಂದ ತರಿಸಿಕೊಳ್ಳಲಾಗುತ್ತದೆ. ಒಮ್ಮೆಗೆ 20 ಸಾವಿರ ಕ್ಯೂಬಿಕ್ ಮೀ. ಲಿಕ್ವಿಡ್ ಆಕ್ಸಿಜನ್ ತರಿಸಿ ದಾಸ್ತಾನು ಮಾಡಿ ಆನಂತರ ಗ್ಯಾಸ್ ಆಗಿ ಸಂಸ್ಕರಿಸಿ ಸಿಲಿಂಡರ್ಗಳಿಗೆ ತುಂಬಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ನಟರಾಜ್, ಸ್ಥಾವರ ಸ್ಥಾಪನೆಯಿಂದಾಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಕಡಿಮೆ ಅವಧಿಯಲ್ಲಿ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತದೆ. ಜಿಲ್ಲೆಯ ಉಡುಪಿ, ಮಣಿಪಾಲ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಸರಕಾರಿ ಮತ್ತು ಖಾಸಗಿ ವಲಯದ 40ಕ್ಕೂ ಅಧಿಕ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬರಾಜು ಮಾಡಲು ಸುಲಭ ಎಂದು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಬೆಳಪುವಿನ ಈ ಘಟಕದಿಂದಾಗಿ ಜಿಲ್ಲೆಯ ಮೆಡಿಕಲ್ ಎಮರ್ಜೆನ್ಸಿಗೆ ಸಹಾಯವಾಗಲಿದೆ. ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
The government now opens an oxygen refilling center in Kapu, Udupi.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm