ಬ್ರೇಕಿಂಗ್ ನ್ಯೂಸ್
26-04-21 05:30 pm Mangalore Correspondent ಕರಾವಳಿ
ಮಂಗಳೂರು, ಎ.26: ಗರ್ಭಿಣಿ ಮಹಿಳೆಯನ್ನು ನಡುರಾತ್ರಿಯಲ್ಲಿ ಕಾರಿನಲ್ಲಿ ಕರೆತರುತ್ತಿದ್ದಾಗ ಕಾರು ಕೆಟ್ಟು ಹೋಗಿತ್ತು. ಇನ್ನೇನು ಮಾಡುವುದೆಂದು ಆಕೆಯ ಗಂಡ ಯೋಚನೆ ಮಾಡುತ್ತಿದ್ದಾಗ, ಅಲ್ಲಿದ್ದ ಪೊಲೀಸರು ಸಹಾಯಕ್ಕೆ ಬಂದಿದ್ದಾರೆ. ಮಾನವೀಯ ಕಾರ್ಯ ಮಾಡಿದ ಕಂಕನಾಡಿ ಗ್ರಾಮಾಂತರ ಠಾಣೆಯ ಎಎಸ್ಐ ಹರೀಶ್ ಕೆ. ಮತ್ತು ಕಾನ್ ಸ್ಟೇಬಲ್ ವಿಜಯ್ ಕುಮಾರ್ ಅವರನ್ನು ಪೊಲೀಸ್ ಕಮಿಷನರ್ ಸನ್ಮಾನಿಸಿದ್ದಾರೆ.


ಗುರುವಾಯನಕೆರೆಯ ಶಾಹಿದಾ (29) ಎಂಬ ಮಹಿಳೆಗೆ ಎ.23ರಂದು ರಾತ್ರಿ ಹೆರಿಗೆ ನೋವು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಗಂಡ ಸಿದ್ದಿಕ್ ತನ್ನ ಆಲ್ಟೋ ಕಾರಿನಲ್ಲಿ ಮಂಗಳೂರಿಗೆ ಕರೆತರುತ್ತದ್ದರು. ಫರಂಗಿಪೇಟೆ ಬಳಿಯ ಅರ್ಕುಳಕ್ಕೆ ತಲುಪಿದಾಗ ನಡುರಾತ್ರಿ 1.30 ಗಂಟೆ ಆಗಿತ್ತು. ಕಾರು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ದಿಕ್ಕು ತೋಚದಾಗಿತ್ತು. ಈ ವೇಳೆ, ಅಲ್ಲಿಯೇ ಸ್ವಲ್ಪ ದೂರದಲ್ಲಿ ಚೆಕ್ ಪೋಸ್ಟ್ ಹಾಕಿದ್ದ ಪೊಲೀಸರ ಬಳಿಗೆ ಸಿದ್ದಿಕ್ ತೆರಳಿದ್ದಾರೆ. ಕಾರು ಕೆಟ್ಟು ಹೋಗಿರುವ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದು, ಕೂಡಲೇ ಅಲ್ಲಿದ್ದ ಪೊಲೀಸರು ನೆರವಿಗೆ ಬಂದಿದ್ದಾರೆ.


ಕಂಕನಾಡಿ ಗ್ರಾಮಾಂತರ ಠಾಣೆಯ ಎಎಸ್ಐ ಹರೀಶ್ ತಮ್ಮದೇ ಇಲಾಖೆಯ ಜೀಪಿನಲ್ಲಿ ಗರ್ಭಿಣಿಯನ್ನು ಕುಳ್ಳಿರಿಸಿ, ಮಂಗಳೂರಿನ ಎಜೆ ಆಸ್ಪತ್ರೆಗೆ ತಲುಪಿಸಿದ್ದಾರೆ. ಶಾಹಿದಾ ಬಾನು ಮರುದಿನ ಬೆಳಗ್ಗೆ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿಷಯ ತಿಳಿದ ಕಮಿಷನರ್ ಶಶಿಕುಮಾರ್, ಇಬ್ಬರು ಸಿಬಂದಿಯನ್ನೂ ಕಚೇರಿಗೆ ಕರೆಸಿ ಸನ್ಮಾನಿಸಿದ್ದಾರೆ. ಸೂಕ್ತ ಸಮಯಕ್ಕೆ ನೆರವಿಗೆ ಬಂದ ಸಿಬಂದಿಯನ್ನು ಅಭಿನಂದಿಸುತ್ತೇನೆ. ಮಹಿಳೆಯ ಬಗ್ಗೆ ಸಿಬಂದಿ ಸಕಾಲದಲ್ಲಿ ನೆರವಿಗೆ ಬರದಿರುತ್ತಿದ್ದರೆ, ತಾಯಿ ಮತ್ತು ಮಗುವಿಗೆ ಅಪಾಯ ಬರುವ ಸಾಧ್ಯತೆಯಿತ್ತು. ಕೆಲವರು ಆಂಬುಲೆನ್ಸ್ ಕರೆಸಿ, ಕಳಿಸಿಕೊಡುವ ವ್ಯವಸ್ಥೆ ಮಾಡುತ್ತಾರೆ. ಆದರೆ, ಇವರು ತಮ್ಮದೇ ವಾಹನದಲ್ಲಿ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ ಎಂದು ಕಮಿಷನರ್ ಇಬ್ಬರು ಸಿಬಂದಿಯ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ರಾತ್ರಿ ವೇಳೆ ಕರ್ಫ್ಯೂ ಇರುವುದರಿಂದ ಪೊಲೀಸರು ಹೆದ್ದಾರಿಯ ಅಲ್ಲಲ್ಲಿ ಗಸ್ತು ನಿರತರಾಗಿದ್ದಾರೆ. ಚೆಕ್ ಪೋಸ್ಟ್ ಹಾಕಿ, ವಿನಾಕಾರಣ ವಾಹನ ಚಲಾಯಿಸುವ ಮಂದಿಯನ್ನು ನಿಯಂತ್ರಿಸುತ್ತಿದ್ದಾರೆ. ಇದರ ಮಧ್ಯೆಯೇ ಇಬ್ಬರು ಪೊಲೀಸ್ ಸಿಬಂದಿ ಮಾನವೀಯ ಕಾರ್ಯ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two police personnel of Kankandy Rural police station were felicitated by Mangalore Police Commissioner for helping in shifting a pregnant woman undergoing labour pain to the hospital in the police car. The police personnel are Mangaluru rural police station assistant sub-inspector Harish K and constable Vijay Kumar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm