ಬ್ರೇಕಿಂಗ್ ನ್ಯೂಸ್
            
                        26-04-21 10:18 pm Mangaluru correspondent ಕರಾವಳಿ
            ಮಂಗಳೂರು, ಎ.26: ಇತಿಹಾಸ ಪ್ರಸಿದ್ಧ ಸೋಮೇಶ್ವರ ಸೋಮನಾಥ ದೇವರ ಬ್ರಹ್ಮಕಲಶ ಸಂಪನ್ನಗೊಂಡ ಬೆನ್ನಲ್ಲೇ ಮಂಗಳೂರು ಸಹಾಯಕ ಕಮಿಷನರ್ ಮದನ್ ಮೋಹನ್ ಎಂಟ್ರಿಯಾಗಿದ್ದು ಕೋವಿಡ್ ನಿಯಮಗಳನ್ನು ಮೀರಿ ಸೇರಿದ್ದ ಜನರನ್ನ ಚದುರಿಸಿದ್ದಾರೆ.

ಕಳೆದ ಬಾರಿ ಕೊರೊನಾ ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟ ಸೋಮನಾಥ ದೇವರ ಬ್ರಹ್ಮಕಲಶೋತ್ಸವ ಇಂದು ಮಧ್ಯಾಹ್ನ ಸಂಪನ್ನಗೊಂಡಿತ್ತು. ಸೋಮನಾಥನಿಗೆ ಮಹಾಪೂಜೆ ನೆರವೇರಿ ಅನ್ನಸಂತರ್ಪಣೆ ನಡೆಯುತ್ತಿದ್ದ ವೇಳೆ ಸಹಾಯಕ ಕಮಿಷನರ್ ಮದನ್ ಮೋಹನ್, ಉಪವಿಭಾಗದ ಎಸಿಪಿ ರಂಜಿತ್ ಬಂಡಾರು, ಸೋಮೇಶ್ವರ ಗ್ರಾಮದ ಗ್ರಾಮಕರಣಿಕೆ ಲಾವಣ್ಯ ಸೇರಿದಂತೆ ಅಧಿಕಾರಿಗಳ ತಂಡವು ಭೇಟಿ ನೀಡಿದ್ದು ಕ್ಷೇತ್ರದಲ್ಲಿ ಕೋವಿಡ್ ಕಟ್ಟುನಿಟ್ಟಿನ ಮಾರ್ಗಸೂಚಿಯ ನಡುವಲ್ಲಿಯೂ ಸೇರಿದ್ದ ಭಕ್ತಾದಿಗಳನ್ನು ಅರ್ಧ ಗಂಟೆಯೊಳಗೆ ಮನೆ ಸೇರುವಂತೆ ಮೈಕ್ ಅನೌನ್ಸ್ ಮೆಂಟ್ ಮೂಲಕ ಆದೇಶಿಸಿದ್ದಾರೆ. ಕೂಡಲೇ ಅಲ್ಲಿ ಅನ್ನಪ್ರಸಾದಕ್ಕೆ ಸೇರಿದ್ದ ಭಕ್ತಾದಿಗಳೆಲ್ಲರೂ ಚದುರಿ ಮನೆಗೆ ಸೇರಿದ್ದಾರೆ.
ಸೋಮೇಶ್ವರಕ್ಕೆ ಕಳೆದ ಸೋಮವಾರ ಸಾಗಿದ ಹಸಿರು ಹೊರೆಕಾಣಿಕೆಯಲ್ಲೂ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ ಎಂದು ತಹಶೀಲ್ದಾರ್ ಗುರುಪ್ರಸಾದ್ ಬ್ರಹ್ಮಕಲಶೋತ್ಸವ ಸಮಿತಿಗೆ ನೋಟೀಸು ನೀಡಿದ್ದಲ್ಲದೆ  ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. 

ಇಂದು ಸಂಜೆ ಶತಮಾನದ ನಂತರ ಸೋಮನಾಥ ದೇವರಿಗೆ ಸಮರ್ಪಣೆಯಾದ ನೂತನ ಬ್ರಹ್ಮರಥೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರೇ ರಥೋತ್ಸವವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದಾರೆ. ನಾಳೆಯಿಂದ ಕ್ಷೇತ್ರದಲ್ಲಿ ನಡೆಯುವ ವರ್ಷಾವಧಿ ಉತ್ಸವಕ್ಕೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಭಗವತಿ ಆವಾಹನೆಗೆ ಸಾಕ್ಷಿಯಾದ ಕ್ಷೇತ್ರ !

ವಾಡಿಕೆ ಪ್ರಕಾರ, ಸೋಮೇಶ್ವರದ ವರ್ಷಾವಧಿ ಜಾತ್ರೆಯ ಕೊನೆಯ ದಿನ ಹತ್ತಿರದ ಅಡ್ಕ ಭಗವತೀ ಕ್ಷೇತ್ರದಲ್ಲಿ ನಡೆಯುವ ವರ್ಷಾವಧಿ ಜಾತ್ರೆಯ ಕೊಡಿಯೇರಿಸಲು ಅಪ್ಪಣೆ ಪಡೆಯಲು ಭಗವತೀ ದೈವಗಳು ಸೋಮನಾಥನ ಭೇಟಿ ಮಾಡಿ ಅಪ್ಪಣೆ ಪಡೆಯೋದು ಪ್ರತೀತಿ. ಇಂದು ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಅಡ್ಕ ಭಗವತೀ ಕ್ಷೇತ್ರದ ಅರ್ಚಕರಿಗೆ ಭಗವತೀ ಆವಾಹನೆಯಾಗಿ ಕಾರಣಿಕ ಪ್ರದರ್ಶನವಾಗಿದೆ. ಆ ಮೂಲಕ ಸೋಮನಾಥ ಮತ್ತು ಭಗವತೀ ದೈವಗಳ ಅವಿನಾಭಾವ ಸಂಬಂಧಕ್ಕೆ ಸಾಕ್ಷಿ ತೋರಿಸಿದೆ.
            
            
            Mangalore AC raids and stops Someshwara Temple programme in the middle for violating covid norms even after government has restricted ban on religious activities.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm