ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm