ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm