ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm