ಪ್ರಧಾನಿ ಮೋದಿ ಬೀದಿ ಹೆಣವಾಗಲೆಂದು ಫೇಸ್ಬುಕ್ ಪೋಸ್ಟ್ ; ಕೊಣಾಜೆ ಠಾಣೆಗೆ ದೂರು

27-04-21 10:37 pm       Mangaluru correspondent   ಕರಾವಳಿ

ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಫೇಸ್ಬುಕ್ ಪೇಜ್ ನಲ್ಲಿ ಪೋಸ್ಟ್ .

Photo credits : ABC News

ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್  ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.

Mangaluru: Three arrested over attempt-to-rape female madrasa students -  Daijiworld.com

ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.

A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.