ಬ್ರೇಕಿಂಗ್ ನ್ಯೂಸ್
28-04-21 08:34 pm Mangaluru correspondent ಕರಾವಳಿ
ಉಳ್ಳಾಲ, ಎ.28: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದು ಆತನ ಮೃತದೇಹ ಬುಧವಾರ ಸಂಜೆ ನೇತ್ರಾವತಿ ತೀರದಲ್ಲಿ ಪತ್ತೆಯಾಗಿದೆ.
ಉಳ್ಳಾಲಬೈಲ್ ನಿವಾಸಿ ನಿತಿನ್(32) ಮೃತ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದು, ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿಗೆ ತೆರಳಿದ್ದರು. ಈ ಪೈಕಿ ನಿತಿನ್ ಮಾತ್ರ ನಾಪತ್ತೆಯಾಗಿದ್ದ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.



ಪೊಲೀಸರ ವಶದಲ್ಲಿರುವ ಇಬ್ಬರು ಸ್ನೇಹಿತರು ನಿತಿನ್ ರೈಲ್ವೇ ಸೇತುವೆಯಲ್ಲಿ ಟ್ರ್ಯಾಕ್ ಮೇಲೆ ಮಲಗಿದ್ದು ರೈಲು ಬಂದಾಗ ತಪ್ಪಿಸುವ ಯತ್ನದಲ್ಲಿ ನದಿಗೆ ಹಾರಿದ್ದಾಗಿ ಹೇಳಿದ್ದಾರಂತೆ. ಘಟನೆಯ ಸತ್ಯಾಸತ್ಯತೆ ಪೊಲೀಸರ ವಿಚಾರಣೆಯಲ್ಲಿ ತಿಳಿಯಬೇಕಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಆಡಂಕುದ್ರುವಿನಲ್ಲಿ ನಿತಿನ್ ಮೃತದೇಹ ಪತ್ತೆಯಾಗಿದ್ದು ದೇಹವು ಸಂಪೂರ್ಣ ಕೊಳೆತು ಹೋಗಿದೆ. ಕಂಕನಾಡಿ ಠಾಣೆ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ಸಮಕ್ಷಮದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಮೃತ ನಿತಿನ್ ಸಹೋದರ ಮತ್ತು ತಾಯಿಯನ್ನು ಅಗಲಿದ್ದಾರೆ.
ಉಳ್ಳಾಲ: ಸ್ನೇಹಿತರ ಜೊತೆಗಿದ್ದ ಯುವಕ ನೇತ್ರಾವತಿ ಸೇತುವೆಯಲ್ಲಿ ದಿಢೀರ್ ನಾಪತ್ತೆ
A 32 year old Man who was missing after he went with his friends to Netravathi Railway bridge his body has been found at river side. The deceased has been identified as Nithin (32). A missing case was filed at Ullal police station.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm