ಬ್ರೇಕಿಂಗ್ ನ್ಯೂಸ್
26-08-20 10:46 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಲಾಕ್ಡೌನ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಕಾರ್ಮಿಕರಿಗೂ ರಾಜಯೋಗ ತಂದಿಟ್ಟಿದೆ. ಲಾಕ್ ಡೌನ್ ಬಳಿಕ ತಮ್ಮೂರಿಗೆ ತೆರಳಿದ್ದ ಉತ್ತರ ಭಾರತ ಮೂಲದ ಮರಳು ಕಾರ್ಮಿಕರನ್ನು ಮಂಗಳೂರಿನ ಹೊಯ್ಗೆ ಮಾಫಿಯಾ ವಿಮಾನದಲ್ಲಿ ತರಿಸಿಕೊಂಡಿದೆ ಎನ್ನುವ ಸುದ್ದಿ ಬಂದಿದೆ.
ಲಾಕ್ಡೌನ್ ಬಳಿಕ ಬದುಕಿದರೆ ಬೇಡಿ ತಿಂದೇನು ಎಂದು ತಮ್ಮೂರಿಗೆ ಓಡಿಹೋಗಿದ್ದ ಕಾರ್ಮಿಕರು ಈಗ ಮತ್ತೆ ನಗರಕ್ಕೆ ಕಾಲಿಡತೊಡಗಿದ್ದಾರೆ. ಆದರೆ, ಉತ್ತರ ಭಾರತ ಮೂಲದ ಮರಳು ಕಾರ್ಮಿಕರು ಆಗಮಿಸಲು ರೈಲು ಸಂಚಾರ ಇಲ್ಲದೆ ಕಷ್ಟವಾಗಿದೆ. ಹೀಗಾಗಿ ಮಂಗಳೂರಿನ ಹೊಯ್ಗೆ ಮಾಲಕರು ಸೇರಿ ನೂರಕ್ಕೂ ಹೆಚ್ಚು ಕಾರ್ಮಿಕರನ್ನು ತುರ್ತಾಗಿ ಫ್ಲೈಟಿನಲ್ಲಿ ಕರೆತಂದಿದ್ದಾರೆ ಎನ್ನಲಾಗುತ್ತಿದೆ.

ಎರಡು ದಿನಗಳ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾರ್ಮಿಕರನ್ನು ನೋಡಿದ ಅಲ್ಲಿನ ಸಿಬಂದಿಗೇ ಅಚ್ಚರಿಯಾಗಿತ್ತು. ಸಾಧಾರಣ ಮಧ್ಯಮ ವರ್ಗದವರೇ ವಿಮಾನ ಹತ್ತಲು ಅಸಾಧ್ಯ ಎನ್ನುವಂತಿದ್ದರೆ, ಮರಳು ಕಾರ್ಮಿಕರು ಜೀವನದಲ್ಲಿ ಎಂದೂ ಸಿಗದ ಭಾಗ್ಯವನ್ನು ತಮ್ಮ ಮಾಲಕರ ಮೂಲಕ ಅನುಭವಿಸಿದ್ದಾರೆ ಎಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಒರಿಸ್ಸಾ ಮೂಲದ ಕಾರ್ಮಿಕರು ಹೆಚ್ಚಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮರಳನ್ನು ತೆಗೆಯುತ್ತಾರೆ. ಜಿಲ್ಲಾಡಳಿತದಿಂದ ಮರಳು ತೆಗೆಯಲು ಅನುಮತಿ ಸಿಕ್ಕಿರದಿದ್ದರೂ, ದಂಧೆಕೋರರು ಈಗಲೇ ಮರಳು ಎತ್ತುವ ಕಾರ್ಯ ಆರಂಭಿಸಿದ್ದಾರೆ.

ಮಂಗಳೂರಿನ ಅಡ್ಯಾರ್, ಕಣ್ಣೂರಿನಲ್ಲಿ ಮರಳು ಎತ್ತುವ ಕಾರ್ಯ ಸರಾಗವಾಗಿ ನಡೆದಿದೆ. ಫಲ್ಗುಣಿ ನದಿಯಿಂದಲೂ ಅಲ್ಲಲ್ಲಿ ಮರಳು ತೆಗೆಯಲು ದಂಧೆಕೋರರು ಕೆಲಸ ಆರಂಭಿಸಿದ್ದಾರೆಂದು ಅಲ್ಲಿನ ಸ್ಥಳೀಯರು ಹೇಳುತ್ತಾರೆ. ಆದರೆ ತುರ್ತಾಗಿ ಮರಳು ತೆಗೆಯಬೇಕಿದ್ದರೆ ಇಲ್ಲಿನ ಕಾರ್ಮಿಕರಿಂದ ಸಾಧ್ಯವಾಗಲ್ಲ. ನದಿಯಲ್ಲಿ ನೀರು ಹೆಚ್ಚಿರುವಾಗ ಮರಳು ತೆಗೆಯುವುದು ಅಪಾಯ ಆಗಿರುವುದರಿಂದ ಸ್ಥಳೀಯ ಕಾರ್ಮಿಕರು ಈ ಕೆಲಸಕ್ಕೆ ಬರಲ್ಲ. ಅದಕ್ಕಾಗಿ ಈ ಹಿಂದೆ ಇಲ್ಲಿ ಮರಳೆತ್ತುವ ಕೆಲಸ ಮಾಡುತ್ತಿದ್ದ ಉತ್ತರ ಭಾರತದ ಕಾರ್ಮಿಕರನ್ನು ಮಾಲಕರು ಮತ್ತೆ ಕರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮರಳು ಉದ್ಯಮ ನಡೆಸುವ ಒಬ್ಬರಲ್ಲಿ ಕೇಳಿದರೆ, ಹೌದಾ.. ನಂಗೊತ್ತಿಲ್ಲ ಮಾರ್ರೇ.. ಎಂದು ಮೂಗು ಮುರಿಯುತ್ತಾರೆ !
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm