ಬ್ರೇಕಿಂಗ್ ನ್ಯೂಸ್
26-08-20 10:46 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಲಾಕ್ಡೌನ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಕಾರ್ಮಿಕರಿಗೂ ರಾಜಯೋಗ ತಂದಿಟ್ಟಿದೆ. ಲಾಕ್ ಡೌನ್ ಬಳಿಕ ತಮ್ಮೂರಿಗೆ ತೆರಳಿದ್ದ ಉತ್ತರ ಭಾರತ ಮೂಲದ ಮರಳು ಕಾರ್ಮಿಕರನ್ನು ಮಂಗಳೂರಿನ ಹೊಯ್ಗೆ ಮಾಫಿಯಾ ವಿಮಾನದಲ್ಲಿ ತರಿಸಿಕೊಂಡಿದೆ ಎನ್ನುವ ಸುದ್ದಿ ಬಂದಿದೆ.
ಲಾಕ್ಡೌನ್ ಬಳಿಕ ಬದುಕಿದರೆ ಬೇಡಿ ತಿಂದೇನು ಎಂದು ತಮ್ಮೂರಿಗೆ ಓಡಿಹೋಗಿದ್ದ ಕಾರ್ಮಿಕರು ಈಗ ಮತ್ತೆ ನಗರಕ್ಕೆ ಕಾಲಿಡತೊಡಗಿದ್ದಾರೆ. ಆದರೆ, ಉತ್ತರ ಭಾರತ ಮೂಲದ ಮರಳು ಕಾರ್ಮಿಕರು ಆಗಮಿಸಲು ರೈಲು ಸಂಚಾರ ಇಲ್ಲದೆ ಕಷ್ಟವಾಗಿದೆ. ಹೀಗಾಗಿ ಮಂಗಳೂರಿನ ಹೊಯ್ಗೆ ಮಾಲಕರು ಸೇರಿ ನೂರಕ್ಕೂ ಹೆಚ್ಚು ಕಾರ್ಮಿಕರನ್ನು ತುರ್ತಾಗಿ ಫ್ಲೈಟಿನಲ್ಲಿ ಕರೆತಂದಿದ್ದಾರೆ ಎನ್ನಲಾಗುತ್ತಿದೆ.

ಎರಡು ದಿನಗಳ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾರ್ಮಿಕರನ್ನು ನೋಡಿದ ಅಲ್ಲಿನ ಸಿಬಂದಿಗೇ ಅಚ್ಚರಿಯಾಗಿತ್ತು. ಸಾಧಾರಣ ಮಧ್ಯಮ ವರ್ಗದವರೇ ವಿಮಾನ ಹತ್ತಲು ಅಸಾಧ್ಯ ಎನ್ನುವಂತಿದ್ದರೆ, ಮರಳು ಕಾರ್ಮಿಕರು ಜೀವನದಲ್ಲಿ ಎಂದೂ ಸಿಗದ ಭಾಗ್ಯವನ್ನು ತಮ್ಮ ಮಾಲಕರ ಮೂಲಕ ಅನುಭವಿಸಿದ್ದಾರೆ ಎಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಒರಿಸ್ಸಾ ಮೂಲದ ಕಾರ್ಮಿಕರು ಹೆಚ್ಚಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮರಳನ್ನು ತೆಗೆಯುತ್ತಾರೆ. ಜಿಲ್ಲಾಡಳಿತದಿಂದ ಮರಳು ತೆಗೆಯಲು ಅನುಮತಿ ಸಿಕ್ಕಿರದಿದ್ದರೂ, ದಂಧೆಕೋರರು ಈಗಲೇ ಮರಳು ಎತ್ತುವ ಕಾರ್ಯ ಆರಂಭಿಸಿದ್ದಾರೆ.

ಮಂಗಳೂರಿನ ಅಡ್ಯಾರ್, ಕಣ್ಣೂರಿನಲ್ಲಿ ಮರಳು ಎತ್ತುವ ಕಾರ್ಯ ಸರಾಗವಾಗಿ ನಡೆದಿದೆ. ಫಲ್ಗುಣಿ ನದಿಯಿಂದಲೂ ಅಲ್ಲಲ್ಲಿ ಮರಳು ತೆಗೆಯಲು ದಂಧೆಕೋರರು ಕೆಲಸ ಆರಂಭಿಸಿದ್ದಾರೆಂದು ಅಲ್ಲಿನ ಸ್ಥಳೀಯರು ಹೇಳುತ್ತಾರೆ. ಆದರೆ ತುರ್ತಾಗಿ ಮರಳು ತೆಗೆಯಬೇಕಿದ್ದರೆ ಇಲ್ಲಿನ ಕಾರ್ಮಿಕರಿಂದ ಸಾಧ್ಯವಾಗಲ್ಲ. ನದಿಯಲ್ಲಿ ನೀರು ಹೆಚ್ಚಿರುವಾಗ ಮರಳು ತೆಗೆಯುವುದು ಅಪಾಯ ಆಗಿರುವುದರಿಂದ ಸ್ಥಳೀಯ ಕಾರ್ಮಿಕರು ಈ ಕೆಲಸಕ್ಕೆ ಬರಲ್ಲ. ಅದಕ್ಕಾಗಿ ಈ ಹಿಂದೆ ಇಲ್ಲಿ ಮರಳೆತ್ತುವ ಕೆಲಸ ಮಾಡುತ್ತಿದ್ದ ಉತ್ತರ ಭಾರತದ ಕಾರ್ಮಿಕರನ್ನು ಮಾಲಕರು ಮತ್ತೆ ಕರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮರಳು ಉದ್ಯಮ ನಡೆಸುವ ಒಬ್ಬರಲ್ಲಿ ಕೇಳಿದರೆ, ಹೌದಾ.. ನಂಗೊತ್ತಿಲ್ಲ ಮಾರ್ರೇ.. ಎಂದು ಮೂಗು ಮುರಿಯುತ್ತಾರೆ !
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm