ಬ್ರೇಕಿಂಗ್ ನ್ಯೂಸ್
29-04-21 02:50 pm Mangalore Correspondent ಕರಾವಳಿ
ಉಳ್ಳಾಲ, ಎ.29 : ಪತಿ ಮೃತಪಟ್ಟ ಎರಡು ಗಂಟೆಗಳ ಅಂತರದಲ್ಲಿ ಪತ್ನಿಯೂ ಕೊನೆಯುಸಿರೆಳೆದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಯಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ದಾರಿಮಧ್ಯೆ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಳಿಕ ಮೃತದೇಹವನ್ನು ಮನೆಗೆ ತಂದಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ತೀವ್ರ ಖಿನ್ನರಾಗಿದ್ದರು. ತಡರಾತ್ರಿ 2:30ರ ಸುಮಾರಿಗೆ ಅವರಿಗೂ ಹೃದಯಾಘಾತ ಆಗಿದ್ದು ಅವರೂ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಲೀಗ್ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಝೀರ್ ಅಹ್ಮದ್ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಬಾರಿ ನಗರ ಪಂಚಾಯಿತಿಗೆ ಸ್ಪರ್ಧಿಸಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿಯಾಗಿ, 15 ವರ್ಷಗಳ ಕಾಲ ಮೇಲಂಗಡಿ ಉರ್ದು ಶಾಲೆಯ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಉಳ್ಳಾಲ ನಗರಸಭೆಯ ಕುಡಿಯುವ ನೀರಿನ ಗುತ್ತಿಗೆದಾರರಾಗಿದ್ದರು. ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ 'ಮಯ್ಯತ್ ಗಾರ್' ನಲ್ಲಿ ನೆರವೇರಿತು.
Their wife dies just in two hours of Husband death in Ullal, Mangalore. Nazir Ahmed (62) died of high BP and their wife Jamila (54) was in trauma after husband death also passed away.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm