ಬ್ರೇಕಿಂಗ್ ನ್ಯೂಸ್
29-04-21 02:50 pm Mangalore Correspondent ಕರಾವಳಿ
ಉಳ್ಳಾಲ, ಎ.29 : ಪತಿ ಮೃತಪಟ್ಟ ಎರಡು ಗಂಟೆಗಳ ಅಂತರದಲ್ಲಿ ಪತ್ನಿಯೂ ಕೊನೆಯುಸಿರೆಳೆದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಯಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ದಾರಿಮಧ್ಯೆ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಳಿಕ ಮೃತದೇಹವನ್ನು ಮನೆಗೆ ತಂದಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ತೀವ್ರ ಖಿನ್ನರಾಗಿದ್ದರು. ತಡರಾತ್ರಿ 2:30ರ ಸುಮಾರಿಗೆ ಅವರಿಗೂ ಹೃದಯಾಘಾತ ಆಗಿದ್ದು ಅವರೂ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಲೀಗ್ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಝೀರ್ ಅಹ್ಮದ್ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಬಾರಿ ನಗರ ಪಂಚಾಯಿತಿಗೆ ಸ್ಪರ್ಧಿಸಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿಯಾಗಿ, 15 ವರ್ಷಗಳ ಕಾಲ ಮೇಲಂಗಡಿ ಉರ್ದು ಶಾಲೆಯ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಉಳ್ಳಾಲ ನಗರಸಭೆಯ ಕುಡಿಯುವ ನೀರಿನ ಗುತ್ತಿಗೆದಾರರಾಗಿದ್ದರು. ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ 'ಮಯ್ಯತ್ ಗಾರ್' ನಲ್ಲಿ ನೆರವೇರಿತು.
Their wife dies just in two hours of Husband death in Ullal, Mangalore. Nazir Ahmed (62) died of high BP and their wife Jamila (54) was in trauma after husband death also passed away.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm