ಬ್ರೇಕಿಂಗ್ ನ್ಯೂಸ್
29-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.29: ದೇಶದಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದಂತೆ ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಇದರಿಂದಾಗಿ ಮಂಗಳೂರಿನಲ್ಲಿ ಕೋವಿಡ್ ಲಸಿಕೆಯಲ್ಲಿ ತೀವ್ರ ಕೊರತೆ ಕಾಣಿಸಿಕೊಂಡಿದೆ.


ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಇಂದು ಲಸಿಕೆ ಕಡಿಮೆಯಾದ ಕಾರಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸರಕಾರ ಮತ್ತು ವೈದ್ಯಕೀಯ ಸಿಬಂದಿಗೆ ಹಿಡಿಶಾಪ ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕಾಂಗ್ರೆಸ್ ನಾಯಕರು ಬಳಿಕ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಜನರಿಗೆ ಲಸಿಕೆ ನೀಡುವಂತೆ ಒತ್ತಾಯಿಸಿದ ಘಟನೆ ನಡೆದಿದೆ.



ಡಿಎಚ್ಓ ಡಾ. ಕಿಶೋರ್ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಕೇವಲ ಎಂಟು ಸಾವಿರ ಲಸಿಕೆ ಮಾತ್ರ ಇದೆಯಂತೆ. ಅದರಲ್ಲೂ ಕೋ ವ್ಯಾಕ್ಸಿನ್ 300 ಮಾತ್ರ ಇದೆ. ಕೋವಿಶೀಲ್ಡ್ ಲಸಿಕೆ ಎಂಟು ಸಾವಿರ ಇದೆಯಂತೆ. ತಾಲೂಕು ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗುರುವಾರ ಲಸಿಕೆ ನೀಡುವುದಿಲ್ಲ. ಮಕ್ಕಳಿಗೆ ಇಂಜೆಕ್ಷನ್ ನೀಡುವ ದಿನವಾಗಿದ್ದರಿಂದ ಲಸಿಕೆ ನೀಡುವುದಕ್ಕೆ ವಿನಾಯ್ತಿ ಇದೆ. ಆದರೆ, ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಾರದ ಎಲ್ಲ ದಿನಗಳಲ್ಲೂ ಲಸಿಕೆ ನೀಡಲಾಗುತ್ತಿದೆ. ಹೀಗಾಗಿ ಲಸಿಕೆ ಹಾಕಿಸಲು ವೆನ್ಲಾಕ್ ಆಸ್ಪತ್ರೆಗೆ ಹೆಚ್ಚು ಮಂದಿ ಆಗಮಿಸಿದ್ದರು.

ಒಬ್ಬ ವ್ಯಕ್ತಿಗೆ ಮೊದಲ ಡೋಸ್ ಕೋವ್ಯಾಕ್ಸಿನ್ ಕಂಪನಿಯದ್ದು ನೀಡಿದ್ದರೆ, ಎರಡನೇ ಡೋಸ್ ಕೂಡ ಅದನ್ನೇ ನೀಡಬೇಕಾಗುತ್ತದೆ. ವೆನ್ಲಾಕ್ ಆಸ್ಪತ್ರೆಗೆ ಕೋವ್ಯಾಕ್ಸಿನ್ ಎರಡನೇ ಡೋಸಿಗಾಗಿ ಬಂದಿದ್ದವರಿಗೆ ಲಸಿಕೆ ಸಿಗದೆ ವಾಪಸಾಗಿದ್ದಾರೆ. ಈಗಿನ ಬೇಡಿಕೆ ಎಷ್ಟಿದೆಯಂದ್ರೆ, ಜಿಲ್ಲೆಯಲ್ಲಿ ದಿನವೊಂದಕ್ಕೆ ಸರಾಸರಿ ಎಂಟು ಸಾವಿರ ಮಂದಿ ಲಸಿಕೆ ಹಾಕಿಸಲು ಬರುತ್ತಿದ್ದಾರೆ. ಹೀಗಾಗಿ ಲಸಿಕೆ ಸಂಗ್ರಹದಲ್ಲಿ ಕೊರತೆ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಸಿಕ್ಕಿದೆ.

ಈ ಬಗ್ಗೆ ಡಿಎಚ್ ಓ ಬಳಿ ಕೇಳಿದರೆ, ಬೆಂಗಳೂರಿನಲ್ಲಿ ಕೋವಿಶೀಲ್ಡ್ ಲಸಿಕೆಯ ಸಂಗ್ರಹ ಇದೆ. ಈಗಾಗ್ಲೇ ಮಂಗಳೂರಿನಿಂದ ಲಸಿಕೆ ತರಲು ವಾಹನ ಕಳಿಸಿದ್ದು, ಶುಕ್ರವಾರ ತಲುಪಲಿದೆ ಎಂದಿದ್ದಾರೆ. ಆದರೆ, 20 ಸಾವಿರ ಅಥವಾ 30 ಸಾವಿರ ಲಸಿಕೆ ಬಂದರೆ, ಇದೇ ರೀತಿಯ ಬೇಡಿಕೆ ಕಂಡುಬಂದರೆ ಅದನ್ನು ಪೂರೈಸುವುದು ಕಷ್ಟ ಎನ್ನುವ ಸ್ಥಿತಿಯಿದೆ. ಇದರ ನಡುವೆಯೇ ಕೇಂದ್ರ ಸರಕಾರ ಮೇ 1ರಿಂದಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಕೊಡಿಸುವ ಮಾತು ಹೇಳಿದೆ. ಅಷ್ಟು ಪ್ರಮಾಣದಲ್ಲಿ ಲಸಿಕೆ ರೆಡಿಯಾಗಿಲ್ಲವೇ ಅಥವಾ ಲಸಿಕೆ ಪೂರೈಕೆ ಆಗುತ್ತಿಲ್ಲವೇ ಎಂಬ ಬಗ್ಗೆ ಮಾಹಿತಿಗಳಿಲ್ಲ. ಸದ್ಯಕ್ಕಂತೂ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸುವುದು ಕಷ್ಟ ಎನ್ನುವ ಮಾತು ಕೇಳಿಬರುತ್ತಿದೆ.
Amid janata curfew in Mangalore hundreds of people throng for covid vaccine but then are disappointed due to Shortage of vaccine in Mangalore. People stand in large que curse govt for their negligence.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm