ಬ್ರೇಕಿಂಗ್ ನ್ಯೂಸ್
29-04-21 07:31 pm Mangaluru correspondent ಕರಾವಳಿ
ಮಂಗಳೂರು, ಎ.29: ಕೊರೊನಾ ಸೋಂಕಿತರು ಮೂಗು ಕಟ್ಟಿದರೆ ನಿಂಬೆ ರಸ ಹಾಕಿಕೊಂಡರೆ ಕ್ಲಿಯರ್ ಆಗತ್ತೆ ಎಂದು ವಿಆರ್ ಎಲ್ ಸಂಸ್ಥಾಪಕ ವಿಜಯ ಸಂಕೇಶ್ವರ ಹೇಳಿಕೆ ನೀಡಿದ್ದು ಭಾರೀ ಸುದ್ದಿಯಾಗಿತ್ತು. ಅದನ್ನು ಪ್ರಶ್ನಿಸಿ, ಫೇಸ್ಬುಕ್ಕಲ್ಲಿ ವಿಡಿಯೋ ಹರಿಯಬಿಟ್ಟಿದ್ದ ಮಂಗಳೂರಿನ ವಿಚಾರವಾದಿ ನರೇಂದ್ರ ನಾಯಕ್ ಅವರಿಗೆ ಫೇಸ್ಬುಕ್ ಪನಿಶ್ಮೆಂಟ್ ನೀಡಿದೆ. ವಿಡಿಯೋ ಡಿಲೀಟ್ ಮಾಡಿದ್ದಲ್ಲದೆ, 18 ಗಂಟೆ ಕಾಲ ಫೇಸ್ಬುಕ್ ಬಳಕೆ ಮಾಡದಂತೆ ನರೇಂದ್ರ ನಾಯಕ್ ಗೆ ಶಿಕ್ಷೆ ನೀಡಿದೆ.

ಈ ನಡುವೆ, ಸಂಕೇಶ್ವರ ಅವರ ನಿಂಬೆ ರಸದ ವಿಚಾರ ತಿಳಿದ ಚಿತ್ರದುರ್ಗದ ವ್ಯಕ್ತಿಯೊಬ್ಬ ಮೂಗಿಗೆ ನಿಂಬೆ ರಸ ಸುರಿದ್ಕೊಂಡು ಮೃತಪಟ್ಟಿದ್ದಾಗಿ ಸುದ್ದಿಯಾಗಿತ್ತು. ಇದೇ ವೇಳೆ, ನರೇಂದ್ರ ನಾಯಕ್ ಸಿಟ್ರಿಕ್ ಆಸಿಡನ್ನು ಮೂಗಿಗೆ ನೇರವಾಗಿ ಸುರಿದುಕೊಳ್ಳಬಾರದು. ಅದು ಮೆದುಳಿಗೆ ಹೋಗಿ ಪ್ರಾಬ್ಲಂ ಆಗಬಹುದು. ಅಲ್ಲದೆ, ನಿಂಬೆ ರಸದಿಂದ ಕೊರೊನಾ ಗುಣಪಡಿಸಬಹುದು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಇದರಿಂದ ಜನರಿಗೆ ಮಿಸ್ ಗೈಡ್ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು.
ನರೇಂದ್ರ ನಾಯಕ್ ಹೇಳಿಕೆ ಮತ್ತು ವಿಜಯ ಸಂಕೇಶ್ವರ ನೀಡಿರುವ ಮಾಹಿತಿಗಳು ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆಯುರ್ವೇದ ತಜ್ಞರು ಈ ಬಗ್ಗೆ ಸ್ಪಷ್ಟನೆ ನೀಡಿ, ಒಂದೆರಡು ಬಿಂದು ನಿಂಬೆ ರಸವನ್ನು ಮೂಗಿಗೆ ಹಾಕಿದರೆ ಯಾವುದೇ ತೊಂದರೆಯಾಗದು. ಒಮ್ಮೆಗೆ ಮೂಗು ಕಟ್ಟಿದ್ದು ಸರಾಗವಾಗಿ ಉಸಿರಾಟ ಸಮಸ್ಯೆ ದೂರವಾಗಬಹುದು. ಹಾಗೆಂದು, ತಕ್ಷಣದ ಚಿಕಿತ್ಸೆ ಅಷ್ಟೇ, ಆಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದಿದ್ದರು. ಇವೆಲ್ಲ ಚರ್ಚೆ, ಸ್ಪಷ್ಟನೆಗಳ ಮಧ್ಯದಲ್ಲೇ ನರೇಂದ್ರ ನಾಯಕ್ ಅವರ ವಿಡಿಯೋವನ್ನು ಸ್ವತಃ ಫೇಸ್ಬುಕ್ ಡಿಲೀಟ್ ಮಾಡಿದೆ.

ಸುಮಾರು 300 ಮಂದಿ ಈ ಬಗ್ಗೆ ರಿಪೋರ್ಟ್ ಹಾಕಿದ್ದಾರಂತೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ರೀತಿಯ ಹೇಳಿಕೆ ನೀಡಿರುವ ಈ ವಿಡಿಯೋ ಡಿಲೀಟ್ ಮಾಡುವಂತೆ ಬರೆದಿದ್ದರಿಂದ ಫೇಸ್ಬುಕ್ ಈ ಕೆಲಸ ಮಾಡಿದೆ. ಅಲ್ಲದೆ, 18 ಗಂಟೆ ಕಾಲ ಫೇಸ್ಬುಕ್ ಬಳಸದಂತೆ ಶಿಕ್ಷೆಯನ್ನೂ ನೀಡಿದೆ. ಶಾಲೆಯಲ್ಲಿ ಮಕ್ಕಳಿಗೆ ಮೇಷ್ಟ್ರು ಶಿಕ್ಷೆ ಕೊಟ್ಟಂತಾಗಿದೆ ಎಂದು ನರೇಂದ್ರ ನಾಯಕ್ ಪ್ರತಿಕ್ರಿಯಿಸಿದ್ದಾರೆ. ವಿಜಯ ಸಂಕೇಶ್ವರ ಪತ್ರಿಕಾ ಸಂಸ್ಥೆಯ ಮಾಲೀಕರಾಗಿದ್ದು ಅವರು ಸುದ್ದಿಗೋಷ್ಠಿ ಕರೆದು ನಿಂಬೆ ರಸದ ವಿಚಾರವನ್ನು ಹೇಳಿದ್ದರು. ನರೇಂದ್ರ ನಾಯಕ್ ವಿಡಿಯೋ ಮಾಡಿದ್ದು, ಸಂಕೇಶ್ವರ ಅವರಿಗೆ ಮುಜುಗರ ಆಗುವ ದೃಷ್ಟಿಯಿಂದ ಅಭಿಮಾನಿಗಳು ಫೇಸ್ಬುಕ್ ಕಂಪನಿಗೆ ರಿಪೋರ್ಟ್ ಬರೆದು ವಿಡಿಯೋ ಡಿಲೀಟ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
ಬಳಕೆದಾರರು ಅಪ್ಲೋಡ್ ಮಾಡುವ ವಿಡಿಯೋದಲ್ಲಿರುವ ಕಂಟೆಂಟ್ ಬಗ್ಗೆ ಸಾರ್ವಜನಿಕ ವಿರೋಧ ಬಂದರೆ, ಫೇಸ್ಬುಕ್ ಆ ವಿಡಿಯೋವನ್ನು ಡಿಲೀಟ್ ಮಾಡುವ ಸ್ವಾತಂತ್ರ್ಯ ಕಾಯ್ದುಕೊಂಡಿದೆ.
Mangalore rationalist Narendra Nayaks Facebook page has been blocked after uploading video on Lemon therapy for oxygen is not right.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm