ಬ್ರೇಕಿಂಗ್ ನ್ಯೂಸ್
            
                        01-05-21 08:24 pm Mangaluru Correspondent ಕರಾವಳಿ
            ಮಂಗಳೂರು, ಮೇ 1: ನೇತ್ರಾವತಿ ನದಿಗೆ ಕಸ ಎಸೆದು ಸಿಕ್ಕಿಬಿದ್ದ ಕಾರು ಮತ್ತು ಮಹಿಳೆಯರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆ ಉಳ್ಳಾಲದ ನೇತ್ರಾವತಿ ನದಿಯ ಸೇತುವೆಯಲ್ಲಿ ಕಾರು ನಿಲ್ಲಿಸಿ, ಕಸದ ಪ್ಯಾಕೆಟನ್ನು ಮಹಿಳೆಯೊಬ್ಬರು ನದಿಗೆ ಎಸೆದಿದ್ದು ಅದನ್ನು ಹಿಂದಿನ ಕಾರಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ, ಮಹಾನಗರ ಪಾಲಿಕೆಯಿಂದ ಕ್ರಮ ಜರುಗಿಸಲಾಗಿದೆ.
ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


ಕಾರಿನಲ್ಲಿದ್ದ ಮೈಸೂರು ಮೂಲದ ಶೈಲಜಾ ನಾಯಕ್, ರಚನಾ ನಾಯಕ್ ಮತ್ತು ಸುಶೀಲಾ ಎಂಬವರ ಮೇಲೆ ಕೇಸು ದಾಖಲಾಗಿದೆ. ಅಲ್ಲದೆ, ಕಾರಿನಲ್ಲಿದ್ದವರು ಮಾಸ್ಕ್ ಧರಿಸದೆ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಪೊಲೀಸರು ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರನ್ನು ಪತ್ತೆ ಮಾಡಿ ತ್ವರಿತ ಕ್ರಮ ಜರುಗಿಸಿದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಕುಮಾರ್ ಕಾರ್ಯ ನಿರ್ವಹಣೆಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ತಮ್ಮ ಟ್ವಿಟರ್ ನಲ್ಲಿ ಶ್ಲಾಘಿಸಿದ್ದಾರೆ.
ಪೊಲೀಸರು ತುರ್ತು ಕ್ರಮ ಕೈಗೊಂಡು ನದಿಯನ್ನು ಮಲಿನ ಮಾಡುವವರಿಗೆ ಬಿಸಿ ಮುಟ್ಟಿಸಿದ ರೀತಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
Read: ಮಂಗಳೂರು: ಧಮ್ ಲಗಾಕೆ ಐಸಾ... ನೇತ್ರಾವತಿ ಸೇತುವೆಯಲ್ಲಿ ಕಾರು ನಿಲ್ಲಿಸಿ ಹಾಕಿದ್ರೂ ಕಸ ! ವೀಡಿಯೋ ವೈರಲ್
Vehicle seized in kankanadi police station. Appreciate the prompt and quick action by Ranjith IPS Acp south and his team.. pic.twitter.com/6JbGT7WevT
— N. Shashi Kumar CP Mangaluru City (@compolmlr) May 1, 2021
            
            
            South Acp Ranjith Kumar and team have took quick action in the incident where a woman was seen throwing garbage over the fence of Netravati bridge in Mangalore. A video of the incident had gone viral on social media on Saturday May 1.Kankanady police seized the car and filed a case responding to a complaint filed by senior health officer of Mangaluru City Corporation.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm