ಬ್ರೇಕಿಂಗ್ ನ್ಯೂಸ್
03-05-21 09:30 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಕೋವಿಡ್ 19 ನಿಯಂತ್ರಿಸುವಲ್ಲಿ ರಾಜ್ಯ ಸಕಾರ ಸಂಪೂರ್ಣ ವಿಫಲ್ಯವಾಗಿರುವುದಕ್ಕೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24 ಮಂದಿ ರೋಗಿಗಳು ಸಾವನ್ನಪ್ಪಿರುವುದು ಸಾಕ್ಷಿಯಾಗಿದೆ. ನಿಜಕ್ಕೂ ಇದೊಂದು ದುರಂತ ಹಾಗೂ ಸರಕಾರದ ಪಾಲಿಗೆ ನಾಚಿಕೆಗೇಡಿನ ಸಂಗತಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಬಗ್ಗೆ ಡಿಸೆಂಬರ್ನಲ್ಲೇ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಬೇಕಾದ ಮೂಲಸೌಕರ್ಯ ಮಾಡಬೇಕಿತ್ತು. ಆದರೆ ಆಡಳಿತದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿನ ಕೋವಿಡ್ ಗಣನೀಯವಾಗಿ ಏರಿಕೆಯಾಗಿದ್ದು, ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಕಾಡುತ್ತಿದೆ. ಚಾಮರಾಜನಗರದಲ್ಲಿ ಒಂದೇ ದಿನದಲ್ಲಿ 24 ಮಂದಿ ಆಕ್ಸಿಜನ್ ಸಿಗದೆ ಮೃತಪಟ್ಟಿರುವುದು ಬೇಸರದ ಸಂಗತಿ. ಕೂಡಲೇ ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಇನ್ನು ಮುಂದೆ ಈ ರೀತಿಯ ಘಟನೆ ನಡೆಯದಂತೆ ಎಚ್ಚರ ವಹಿಸಬೇಕಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸಮಸ್ಯೆ ಎದುರಾಗಿದೆ. ಇದೇ ರೀತಿ ಮುಂದುವರಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಂಗಳೂರು, ಚಾಮರಾಜನಗರ ಪರಿಸ್ಥಿತಿ ಬರಬಹುದು. ಜಿಲ್ಲಾಡಳಿತ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಮಾಡಬೇಕು. ಜನರ ಸಂಕಷ್ಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸವನ್ನು ಆಡಳಿತ ಮಾಡಲಿ ಎಂದರು.
ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಜಿಲ್ಲೆಯ ಜನರು ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಆರೋಗ್ಯ ದೃಷ್ಟಿಯಿಂದ ಹೆಚ್ಚಿನ ಜಾಗೃತಿ ವಹಿಸಬೇಕಾಗಿದೆ. ಪ್ರತಿಯೊಬ್ಬರೂ ಸರಕಾರ, ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿಕೊಂಡು ಸಹಕಾರ ನೀಡಿದಾಗ ಮಾತ್ರ ಕೋವಿಡ್ ಮಾಹಾಮಾರಿಯನ್ನು ನಿಗ್ರಹಿಸಲು ಸಾಧ್ಯ ಎಂದು ಹರೀಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
BJP government is sole responsible for the death of 24 Covid-19 patients died in the last 24 hours after a government hospital in Karnataka’s Chamarajanagar allegedly ran out of medical oxygen stated Congress MLC Harish Kumar in Mangalore.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am