ಬ್ರೇಕಿಂಗ್ ನ್ಯೂಸ್
04-05-21 11:19 am Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರದ ಆವರ್ಸೆ ಪಡುಮನೆ ಮೂಲದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು.
ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAM ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು. ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು. ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.
Mangalore Senior Journalist Surendra Shetty passes away at 57. He was suffering from health issues and was admitted in the hospital.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm